ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾವು ಕಡಿತದಿಂದ 10ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಬಳ್ಳಾರಿ : ಹಾವು ಕಡಿತವು ಹಾವಿನ ಕಡಿತದಿಂದ ಉಂಟಾಗುವ ಗಾಯ. ಇದು ಅನೇಕ ವೇಳೆ ಪ್ರಾಣಿಗಳ ವಿಷದಹಲ್ಲುಗಳಿಂದ ಉಂಟಾದ ರಂಧ್ರದ ಗಾಯದ ಪರಿಣಾಮವಾಗಿರುತ್ತದೆ, ಮತ್ತು ಕೆಲವು ವೇಳೆ ವಿಷ ಒಳ ಸೇರುವಿಕೆಯಿಂದ ಜೀವ ಕೊನೆಗೊಳ್ಳುತ್ತದೆ.
ನಾಗರ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ನಡೆದಿದೆ.
ಮೋಕ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಶ್ರಾವಣಿ ಸಾವನ್ನಪ್ಪಿರುವ ಬಾಲಕಿ. ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಬಾಲಕಿಗೆ ಮೂರು ಬಾರಿ ಹಾವು ಹಚ್ಚಿದೆ. ಕೈ ಮತ್ತು ಕಾಲಿಗೆ ಕಚ್ಚಿದ ನಾಗರ ಹಾವು ಕಡಿದರೂ ಎಚ್ಚರವಾಗದೇ ಬಾಲಕಿ ಮಲಗಿದ್ದಳು, ಬೆಳಿಗ್ಗೆ ಬಾಲಕಿ ಮೃತಳಾಗಿದ್ದಾಳೆ. ಇನ್ನೂ ಬೆಳಗ್ಗೆಯಾದರೂ ಸಹ ನಾಗರಹಾವು ಮನೆಯಲ್ಲೇ ಇತ್ತು ಎಂದು ತಿಳಿದುಬಂದಿದೆ.

ಹೊಸ ಮೋಕಾ ಗ್ರಾಮದ ಲಕ್ಷ್ಮಣ ಹಾಗೂ ಶೇಕಮ್ಮ ಎನ್ನುವ ದಂಪತಿಯ ಮಗಳು ಶ್ರಾವಣಿ, ತೀವ್ರ ಬಡತನ ಹಿನ್ನೆಲೆ ಹಳೆ ಮನೆಯಲ್ಲಿ ವಾಸವಾಗಿದ್ದರು. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ವರದಿ : ಜಿಲನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ