ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಹಳ್ಳಿಯಲ್ಲಿ 134 ನೇ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಭಾರತ ದೇಶದ ಅಪ್ರತಿಮ ಹೋರಾಟಗಾರಗಾರ, ಪ್ರಗತಿಪರ ಚಿಂತಕ, ಸಮಾಜ ಸುಧಾರಕ, ಸಾಮಾಜಿಕ ನ್ಯಾಯದ ಪ್ರತಿಪಾದಕರಾಗಿದ್ದ, ಮಹಾ ಮಾನವತವಾದಿ, ಸಂವಿಧಾನ ಶಿಲ್ಪಿ ಡಾ ll ಬಿ. ಆರ್. ಅಂಬೇಡ್ಕರರವರು ಭಾರತೀಯ ಸಮಾಜದ ಕೆಳಸ್ತರದಿಂದ ಬಂದು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಬಲ ಹೋರಾಟ ಮಾಡಿ, ಪ್ರಜಾ ಸುತ್ತಾತ್ಮಕ, ಮೌಲ್ಯಗಳನ್ನು ಎತ್ತಿ ಹಿಡಿದು,ಎಲ್ಲರಿಗೂ ಆದರ್ಶ ಪ್ರಾಯಾರಾದವರು. ಭಾರತ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರ ರಾಗಿ ಭಾರತ ಸಂವಿಧಾನ ಜಾರಿಗೆ ಬರುವಲ್ಲಿ ಇವರ ಪಾತ್ರವೂ ಬಹಳ ಮುಖ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಶ್ರೀಮಂತ ಗಂಜಿ ಮುಖ್ಯ ಗುರುಗಳು ಸ. ಹಿ. ಪ್ರಾ. ಕುಡಹಳ್ಳಿ ರವರು ಮಾತನಾಡಿದರು.
ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ರಮೇಶ್ ದೇವನ್ಕರ್ ಹಾಗೂ ಊರಿನ ಹಿರಿಯ ವ್ಯಕ್ತಿ ನಾಗಣ್ಣ ಶಿವುದೇ, ಶಾಲೆಯ ಶ್ರೀಮಂತ ಗಂಜಿ ಮುಖ್ಯ ಶಿಕ್ಷಕರು ಹಾಗೂ ಶಂಕರ ಕಣ್ಣಿ ಶಿಕ್ಷಕರು, ಪ್ರಭಾಕರ್ ಸರ್ ಮತ್ತು ಅಡುಗೆ ಸಿಬ್ಬಂದಿಯವರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.

ವರದಿ: ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ