ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಣೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ 22ನೇ ವಾರ್ಡಿನ ಎಂ.ಡಿ ಕ್ಯಾಂಪ್ ನಲ್ಲಿ ಜೈ ಭೀಮ್ ಜನ ಶಕ್ತಿ ಸಂಘಟನೆಯಿಂದ 134ನೇ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಶಾಸಕ ಜೆ.ಎನ್.ಗಣೇಶ ಅವರ ಸುಪುತ್ರ ಗೋಕುಲ ನಾಯಕ ನೇತೃತ್ವದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್‌ಗಳನ್ನು ಸೋಮವಾರ ವಿತರಿಸಿದರು.
ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಪುಷ್ಪ ಅರ್ಪಿಸಿದ ನಂತರ ಮಾತನಾಡಿ, ಅಂಬೇಡ್ಕರ್ ಕೊಡುಗೆ ಬಹಳಷ್ಟಿದ್ದು, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು, ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಜೈ ಭೀಮ್ ಜನ ಶಕ್ತಿ ಸಂಘಟನೆ ಅಧ್ಯಕ್ಷ ಎನ್.ಗಂಗಣ್ಣ ಮಾತನಾಡಿ, ಅಂಬೇಡ್ಕರ್ ಅವರ ಹಾದಿಯಲ್ಲಿ ನಡೆಯಬೇಕು. ಮಕ್ಕಳಿಗೆ ಶಿಕ್ಷಣ ನೀಡಬೇಕು. ಸೂರ್ಯ–ಚಂದ್ರ ಇರುವವರೆಗೂ ಅಂಬೇಡ್ಕರ್ ಅವರ ಸಿದ್ಧಾಂತ ಮತ್ತು ವಿಚಾರಗಳು ಜೀವಂತವಾಗಿ ಇರುತ್ತವೆ. ಅವರ ಆಸೆಯದಂತೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದರು.
ಪುರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ರಾಮಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ ಬಾಷಾ, ವೀರಾಂಜನೇಯ, ಟಿ.ವಿ.ಸುದರ್ಶನರೆಡ್ಡಿ, ಸ.ಕಿ.ಪ್ರಾ.ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕಾಳಿಂಗ, ಶಿಕ್ಷಕಿಯರಾದ ಸರಸ್ವತಿ, ಲತಾ, ನಿರ್ಮಿಲ, ಜೈ ಭೀಮ್ ಜನ ಶಕ್ತಿ ಸಂಘಟನೆ ಉಪಾಧ್ಯಕ್ಷ ಬಿ.ಕೆ.ವಿರುಪಾಕ್ಷಿ, ಮುಖಂಡರಾದ ಬಿ.ಸಿದ್ದಪ್ಪ, ಬ್ರಹ್ಮಯ್ಯ, ಸುಧಕರ, ಬಿ.ಕೆ.ವಿರುಪಾಕ್ಷಿ, ಕೊಟ್ಟೂರು ರಮೇಶ, ಶೇಖರ, ಪ್ರಸಾದ್, ಹುಲುಗಪ್ಪ, ಯಲ್ಲಪ್ಪ, ಪಿ.ರಾಜ, ಶಶಿಕುಮಾರ ಸೇರಿದಂತೆ ಅನೇಕರಿದ್ದರು.

ಅಂಬೇಡ್ಕರ್ ವೃತ್ತ: ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಅಸ್ಪೃಶ್ಯರ ವಿಮೋಚನೆ ಸಮಿತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ವಿಜೃಂಭಣೆಯಿಂದ ಆಚರಿಸಿದರು. ಈ ಸಂದರ್ಭದಲ್ಲಿ ಸಮಿತಿ ರಾಜ್ಯ ಉಪಾಧ್ಯಕ್ಷ ಕೆ.ಲಕ್ಷ್ಮಣ, ಜಿಲ್ಲಾಧ್ಯಕ್ಷ ಎನ್.ಬುಜ್ಜಿಕುಮಾರ ಸೇರಿದಂತೆ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

ವರದಿ : ಜಿಲಾನ್ ಸಾಬ್ ಬಡಿಗೇರ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ