ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಹಾಪುರ : ನ್ಯಾಯವಾದಿಗಳ ಸಂಘದಲ್ಲಿ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಯಾದಗಿರಿ : ಜಿಲ್ಲೆಯ ಶಹಾಪುರ ನಗರದ ನ್ಯಾಯವಾದಿಗಳ ಸಂಘದಲ್ಲಿ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಹಾಪುರದ ನ್ಯಾಯಾಲಯದಲ್ಲಿ ಹಿರಿಯ ವಕೀಲರಾದ ಚನ್ನಬಸವ ವನದುರ್ಗ ಅವರು ಮಾತನಾಡುತ್ತಾ ನೀವು ಮೊದಲು ಸಂವಿಧಾನದ ಪೀಠಿಕೆ ಓದಿ ಎಂದು ಕಿವಿ ಮಾತು ಹೇಳಿ ಸಂವಿಧಾನದಲ್ಲಿ ನಾಲ್ಕು ಅಂಶಗಳನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಳ್ಳಬೇಕು ಅವುಗಳೆಂದರೆ ಸಾರ್ವಭೌಮ, ಜಾತ್ಯಾತೀತ, ಪ್ರಜಾಸತ್ತಾತ್ಮಕ, ಸಮಾಜವಾದಿ ಮತ್ತು ಅವುಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಅದೇ ರೀತಿಯಾಗಿ ಹಿರಿಯ ಶ್ರೇಣಿಯ ನ್ಯಾಯಾಲಯದ ನ್ಯಾಯಾಧೀಶರಾದ ಟಿ. ಪಿ. ಸಿದ್ದರಾಮಪ್ಪ ಅವರು ಮಾತನಾಡಿ ಸಮಾಜದಲ್ಲಿ ಸರಿಯಾಗಿ ಕಾನೂನು ಪಾಲನೆ ಮಾಡಬೇಕು ಎಂದರು. ಮತ್ತು ಅದೇ ರೀತಿಯಾಗಿ ವಕೀಲರ ಸಂಘದ ಅಧ್ಯಕ್ಷರು ಮಾತನಾಡಿ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ಸವಿಸ್ತಾರವಾಗಿ ತಿಳಿಸಿ ಮಹಿಳೆಯರ ಬಗ್ಗೆ ಸಂವಿಧಾನ ಮೂಲಕ ಅವರಿಗೆ ಸರಿಯಾದ ಸ್ಥಾನಮಾನದ ಬಗ್ಗೆ ನೀಡಿರುವ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಸಂತೋಷ ದೇಶಮುಖ, ಜಯಲಾಲ ತೋಟದ ಮನೆ, ಅಮರೇಶ, ಭೀಮರಾಯ ಫರವಿನ್, ಮರೆಪ್ಪ ಸರ್, ಹಯ್ಯಾಳಪ್ಪ ಹೊಸಮನಿ, ದೊಡ್ಡೇಶ, ಸಿದ್ದು ಕನಗನಹಳ್ಳಿ, ಚೇತನ ಹಿರೇಮಠ, ರಾಜೇಂದ್ರ, ಸತ್ಯಮ್ಮ ಮತ್ತು ಸಂಘದ ಪದಾಧಿಕಾರಿಗಳು ಮತ್ತು ಸಂಘದ ಪ್ರಮುಖ ಮತ್ತು ಹಿರಿಯರು ಮತ್ತು ಕಿರಿಯರು ಭಾಗವಹಿಸಿದ್ದರು.

ವರದಿ :ಚೇತನ ಹಿರೇಮಠ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ