ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಕಣ್ಣಿನ ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸಿದ್ದ : ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿಕ್ಕೇನಕೊಪ್ಪ ಚನ್ನವೀರ ಶರಣರ ಬಳಗದ ಉಚಿತ ಕಣ್ಣಿನ ಆಸ್ಪತ್ರೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವುದಾಗಿ ಶಾಸಕ ಜೆ.ಎನ್.ಗಣೇಶ್ ತಿಳಿಸಿದರು.
ಅವರು ಬುಧವಾರ ಕಂಪ್ಲಿ ಪಟ್ಟಣದ ಕುರುಗೋಡು ರಸ್ತೆಯಲ್ಲಿ ಪಟ್ಟಣದ ಪೋಲೂರು ನಾರಯಣಪ್ಪ ಕುಟುಂಬದವರು ಹಾಗೂ ಪೋಲೂರು ಸತ್ಯನಾರಾಯಣ ಅವರು 17 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದ್ದು, ಈ ಜಮೀನಿನಲ್ಲಿ ಚಿಕ್ಕೇನಕೊಪ್ಪ ಚನ್ನವೀರ ಮಹಾಸ್ವಾಮಿಗಳ ಬಳಗದವರು ನಿರ್ಮಿಸಲಿರುವ ಉಚಿತ ಕಣ್ಣಾಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿ ಶರಣರ ಬಳಗದವರು ಕಂಪ್ಲಿ ಪಟ್ಟಣದಲ್ಲಿ ನಿರಂತರವಾಗಿ ಉಚಿತವಾಗಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರವನ್ನು ನಡೆಸುತ್ತಿರುವುದು ವರದಾನವಾಗಿದೆ ಅದೊಂದು ಆಶ್ರಯವಾಗಿದ್ದು, ಇದೀಗ ಪಟ್ಟಣದಲ್ಲಿ ನಿರಂತರವಾಗಿ ಉಚಿತ ನೇತ್ರ ಚಿಕಿತ್ಸೆ ನಡೆಸಬೇಕೆನ್ನುವ ನಿಟ್ಟಿನಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮುಂದಾಗಿರುವುದು ಉತ್ತಮ ಪ್ರಯತ್ನವಾಗಿದೆ. ಈ ಉಚಿತ ಕಣ್ಣಾಸ್ಪತ್ರೆಗೆ ಅಗತ್ಯ ಇರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಹಾಗೂ ವಿವಿಧ ಕಾರ್ಖಾನೆಗಳೊಂದಿಗೆ ಚರ್ಚಿಸಿ ಸೂಕ್ತ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದರು.
ಚಿಕ್ಕೇನಕೊಪ್ಪ ಚೆನ್ನವೀರ ಮಹಾಸ್ವಾಮಿಗಳ ಬಳಗದ ಕಾರ್ಯದರ್ಶಿ ಡಾ. ಜಂಬುನಾಥ್ ಗೌಡ ಮಾತನಾಡಿ ಇದುವರೆಗೂ ಕಂಪ್ಲಿ ಪಟ್ಟಣದಲ್ಲಿ 25ಸೇರಿದಂತೆ 30ಕ್ಕೂ ಅಧಿಕ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ 6 ಸಾವಿರಕ್ಕೂ ಅಧಿಕ ಜನರಿಗೆ ಬೆಳಕನ್ನು ನಮ್ಮ ಬಳಗ ನೀಡಿದೆ. ಪಟ್ಟಣದ ರೈತ ಕುಟುಂಬವಾದ ಪೋಲುರು ನಾರಾಯಣಪ್ಪ ಮತ್ತು ಕುಟುಂಬದವರು 17 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದ್ದು, ಅನುಕೂಲವಾಗಿದೆ. ದಾನಿಗಳು, ಸ್ನೇಹಿತರ ಕೈಜೋಡಿಸಿದರೆ ಇನ್ನೊಂದು ವರ್ಷದಲ್ಲಿ ಪಟ್ಟಣದಲ್ಲಿ ಅತ್ಯಾಧುನಿಕ ನೇತ್ರ ಶಸ್ತ್ರ ಚಿಕಿತ್ಸಾ ಆಸ್ಪತ್ರೆಯನ್ನು 2.5.ಕೋ.ರೂಗಳ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಸುಮಾರು 58 ಲಕ್ಷರೂಗಳ ಯಂತ್ರಗಳನ್ನು ಅಳವಡಿಸಿ ಆಸ್ಪತ್ರೆಯನ್ನು ಆರಂಭಿಸಿ ಉಚಿತ ಸೇವೆಯನ್ನು ನೀಡಲಾಗುವುದು ಎಂದರು.
ನಂತರ ಜಮೀನಿನ ದಾನಿಗಳಾದ ಪೋಲೂರು ಪಿ.ಸತ್ಯನಾರಾಯಣ, ಶಾಸಕರಾದ ಜೆ.ಎನ್.ಗಣೇಶ್, ಕೆಶ್ರೀನಿವಾಸರಾವ್, ಡಾ.ಜಂಬುನಾಥ್ ಗೌಡ ಅವರನ್ನು ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ