ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸಲು ಜಾಗ್ರತೆ ವಹಿಸಿ : ಎಂ.ಈರಣ್ಣ

ಬಳ್ಳಾರಿ/ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಗ್ರಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ಈರಮ್ಮ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆ ಬುಧವಾರ ನಡೆಯಿತು.
ನಂತರ ರೀಡ್ಸ್ ಸಂಸ್ಥೆಯ ಪ್ರೋಗ್ರಾಮ್ ಮ್ಯಾನೇಜರ್ ಎಂ.ಈರಣ್ಣ ಮಾತನಾಡಿ, ರಾಜ್ಯದಲ್ಲಿ ಶೇ.43ರಷ್ಟು ಮಕ್ಕಳಿದ್ದಾರೆ. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಮಕ್ಕಳ, ಮಹಿಳೆಯರ, ಯುವಕರ ಮತ್ತು ರೈತರನ್ನು ಸಂಘಟಿಸಿ ಸಬಲೀಕರಿಸಿ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡುವುದು ಹಾಗೂ ಸುಸ್ಥಿರ ಜೀವನೋಪಾಯಗಳನ್ನು ಕಲ್ಪಿಸುವುದು. ಬಾಲ್ಯ ವಿವಾಹ, ಬಾಲ ಕಾರ್ಮಿಕ, ಲಿಂಗತಾರತಮ್ಯ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆಗೊಳಿಸುವ ಮೂಲಕ ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳನ್ನು ಸಂರಕ್ಷಿಸುವುದು ಮತ್ತು ಲಿಂಗ ಅಸಮಾನತೆ ತಡೆಯುವ ಉದ್ದೇಶವಾಗಿದೆ. ಪೋಷಕರು ಸೇರಿದಂತೆ ಪ್ರತಿಯೊಬ್ಬರು ಮಕ್ಕಳಿಗೆ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಜಾಗೃತಿವಹಿಸಬೇಕು ಎಂದರು.
ಪಿಡಿಒ ಹನುಮಂತಪ್ಪ ಮಾತನಾಡಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪಿಡಿಒ ಹನುಮಂತಪ್ಪ, ಉಪಾಧ್ಯಕ್ಷ ಉಮೇಶ, ಸದಸ್ಯರಾದ ಕುಂಬಾರ ವಿರುಪಾಕ್ಷಪ್ಪ, ಚನ್ನದಾಸರ ಚನ್ನಮ್ಮ, ಬೂದಾಳ ರವಿಕುಮಾರ್, ದೇವರಮನೆ ಮಲ್ಲಮ್ಮ, ಎನ್.ನಾಗರಾಜ, ಓಂಕಾರಪ್ಪ ವದ್ದಿಗೇರಿ ಮಾರೆಮ್ಮ, ಚನ್ನದಾಸರ ಉಮಾದೇವಿ, ಫಕೂರ್ಬಿ, ರೀಡ್ಸ್ ಸಂಸ್ಥೆಯ ತಾಲೂಕು ಸಂಯೋಜಕ ಶಶಿಭೂಷಣ್ ಸೇರಿದಂತೆ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ