ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೇ 1ರಂದು ರಬಕವಿಯಲ್ಲಿ ಕಾಯಕ ಯೋಗಿ ದಿನಾಚರಣೆ : ಚಿರಂಜೀವಿ ರೋಡಕರ್.

ಬಾಗಲಕೋಟೆ :ಮೇ 01 ರಂದು ರಬಕವಿ ನಗರದ ಶ್ರೀ ಶಿವದಾಸಿಮಯ್ಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಕಾಯಕ ಯೋಗಿ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿರಂಜೀವಿ ರೋಡಕರ್ ಅವರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ಕರೆದ ಸಭೆಯಲ್ಲಿ ಪತ್ರಿಕೆಗೆ ತಿಳಿಸಿದರು. ಶರಣರ ಕಾಯಕ ತತ್ವ ಆಧಾರಿಸಿ ರಾಜ್ಯದ ಆಯಾ ಜಿಲ್ಲೆಗನುಗುಣವಾಗಿ ಒಬ್ಬರನ್ನು ಕಾಯಕ ಯೋಗಿ ಎಂದು ಗುರುತಿಸಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಇದೇ ಕಾರ್ಯಕ್ರಮದಲ್ಲಿ ರಬಕವಿ -ಬನಹಟ್ಟಿ, ಜಮಖಂಡಿ, ಮುಧೋಳ ಸಮಿತಿಗಳ ಪದಗ್ರಹಣ, ಪುಸ್ತಕ ಬಿಡುಗಡೆ, ಮತ್ತು ಪವಾಡ ಬಯಲು ಕಾರ್ಯಕ್ರಮಗಳು ಸಹ ಇರುತ್ತವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ರಾಜಮಾನೆ, ತಾಲೂಕು ಅಧ್ಯಕ್ಷ ಅಶೋಕ ಬಾಗೇನ್ನವರ, ಪ್ರಧಾನ ಕಾರ್ಯದರ್ಶಿ ಮೂಕೇಶ ತೇಲಿ, ಜಿಲ್ಲಾ ಉಪಾಧ್ಯಕ್ಷರಾದ ಜಿ ಐ ಹತ್ತಳ್ಳಿ, ರೇಖಾ ಕುಳ್ಳೋಳ್ಳಿ, ಆರ್ ಬಿ ಹೊಟ್ಕರ, ಪಿ ಬಿ ಆಲಗೂರು, ಮಹಾಲಿಂಗಪ್ಪ ತೇಲಿ, ಶೈಲಾ ಮಿರ್ಜಿ, ನಿರ್ಮಲಾ ಬೀಳಗಿ, ಕೀರ್ತಿ ಹೊಸಮನಿ, ಪ್ರಶಾಂತ ಒಡೆಯರ್, ಬಿ ಡಿ ನೇಮಗೌಡ ಹಾಗೂ ಸಮಿತಿ ಸದಸ್ಯರು ಇತರೆ ಸಂಘಟನೆಗಳ ಅಧ್ಯಕ್ಷರು, ಸದಸ್ಯರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ