ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇದೇ 23ರಂದು ಕಾಂಗ್ರೆಸ್ ಸರಕಾರದಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ.

ಯಾದಗಿರಿ: ಇಂದು ಗುರುಮಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಸರಕಾರದ
ಬೆಲೆ ಏರಿಕೆಯ ವಿರೋಧಿಸಿ ಜನಾಕ್ರೋಶಯಾತ್ರೆಯ ಕುರಿತಾದ ಕಾರ್ಯಕಮದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಜನಾಕ್ರೋಶ ಯಾತ್ರೆಯು ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಯಾದಗಿರಿ ನಗರದ ತಹಶೀಲ್ದಾರ ಕಚೇರಿಯಿಂದ ಸುಭಾಷ್ ವೃತ್ತದವರೆಗೆ ಜರುಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ಯಾದಗಿರಿ ನಗರ ಸಭೆ ಅಧ್ಯಕ್ಷರು ಆದ ಕು: ಲಲಿತಾ ಅನಪುರ್ ತಿಳಿಸಿದರು, ಜನಾಕ್ರೋಶ ಯಾತ್ರೆಯಲ್ಲಿ ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಭಾಗವಹಿಸಬೇಕು, ಸರಕಾರಕ್ಕೆ ಜನರು ಬೆಲೆ ಏರಿಕೆಯಿಂದ ಒಂದರ ಮೇಲೆ ಒಂದು ಗಾಯದ ಮೇಲೆ ಬರೆ ಎಳೆದಂತೆ ಜನ ತತ್ತರಿಸಿ ರೋಸಿ ಹೋಗಿದ್ದಾರೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಯಾತ್ರೆ ನಮ್ಮದಾಗಲಿ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾನಾಡಿದರು.
ಈ ಸಭೆಯಲ್ಲಿ ಯಾದಗಿರಿ ಬಿಜೆಪಿಯ ಜಿಲ್ಲಾಧ್ಯಕ್ಷರಾದ ಬಸವರಾಜ್ ವಿಭೂತಿಹಳ್ಳಿ, ಬಿಜೆಪಿ ಗುರುಮಠಕಲ್ ಮಂಡಲ ಅಧ್ಯಕ್ಷರು ನರಸಿಂಹಲು ನೀರೇಟಿ, ಪಕ್ಷದ ಹಿರಿಯ ಮುಖಂಡರು, ಯುವ ಮುಖಂಡರು, ಎಲ್ಲಾ ಮೋರ್ಚಾದ ಪದಾಧಿಕಾರಿಗಳು
ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ