ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೇಮರೆಡ್ಡಿ ಮಲ್ಲಮ್ಮನ ಜೀವನ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆ

ಬಳ್ಳಾರಿ/ ಸಿರುಗುಪ್ಪ: ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ’ ಎಂದು ಸಿರುಗುಪ್ಪದ ಶ್ರೀಗುರು ಬಸವ ಮಹಾಮಠದ ಬಸವಭೂಷಣ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಶುಕ್ರವಾರದಿಂದ ಹಮ್ಮಿಕೊಂಡಿರುವ ಹೇಮರೆಡ್ಡಿ ಮಲ್ಲಮಾಂಬೆಯ ಜೀವನದರ್ಶನ ಪುರಾಣ ಪ್ರವಚನ ಉದ್ಘಾಟಿಸಿ, ಅರ್ಥಪೂರ್ಣ ಬದುಕು ಸಾಗಿಸಿದ ಮಲ್ಲಮ್ಮನ ವಿಚಾರಧಾರೆಗಳು ಮನೆ-ಮನಕ್ಕೆ ತಲುಪುವಂತಾಗಬೇಕು ಎಂದರು.
ಶ್ರೀಮಠದ ಬಸವರಾಜಯ್ಯ ತಾತನವರು ಮಾತನಾಡಿ, ಏ.26ರಂದು ಶಾಸ್ತ್ರಿಗಳ, ಬಸವಮ್ಮನವರ ಪುಣ್ಯಸ್ಮರಣೆ ಅಂಗವಾಗಿ ಕರ್ತೃ ಗದ್ದುಗೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಉಚಿತ ಸಾಮೂಹಿಕ ವಿವಾಹಗಳು, ಮಹಾರಥೋತ್ಸವ ಜರುಗಲಿದೆ ಎಂದು ವಿವರಿಸಿದರು.
ಗಡಿನಾಡ ಕನ್ನಡ ಸಾಹಿತಿ ನಾ.ಮ. ಮರುಳಾರಾಧ್ಯರ ಪುರಾಣ ಪ್ರವಚನಕ್ಕೆ ಎನ್. ಎಂ. ಜಗದೀಶ ಗವಾಯಿಗಳ ಪುರಾಣ ವಾಚನ ಮತ್ತು ಹಾರ್ಮೋನಿಯಂ, ಶಾಂತವೀರಯ್ಯಸ್ವಾಮಿ ದಿಲ್‍ರುಬಾ, ಅದವಾನಿ ಸಂತೋಷ್ ಕುಮಾರ್ ತಬಲಾಸಾಥ್ ನೀಡಿದರು.
ಶರಣ ಶ್ರೀಕಂಠಯ್ಯಶಾಸ್ತ್ರಿಗಳು, ಶರಣ ಕಲಿಗಣನಾಥಸ್ವಾಮಿ, ಪೇಸಲಬಂಡೆ ವೀರಭದ್ರಗೌಡ, ಶ್ರೀಶರಣ ದೊಡ್ಡಯ್ಯತಾತನವರ ಶಿವಾನುಭವ ಟ್ರಸ್ಟ್ ಪದಾಧಿಕಾರಿಗಳು, ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳ ಶ್ರೀಮಠದ ಭಕ್ತರು ಭಾಗವಹಿಸಿದ್ದರು.

ವರದಿ ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ