ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನರೇಗಾ ಕಾಮಗಾರಿ ಪರಿಶೀಲಿಸಿದ ಸಿಇಒ ಮೊಹಮ್ಮದ್ ಹ್ಯಾರಿಸ್

ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಬಳ್ಳಾರಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ ಸೋಮವಾರ ಭೇಟಿ ನೀಡಿ, ಪರಿಶೀಲಿಸುವ ಜತೆಗೆ ಕುಡಿಯುವ ನೀರು, ರಕ್ಷಣಾ ಕವನ ಸೇರಿದಂತೆ ನಾನಾ ಸೌಲಭ್ಯಗಳನ್ನು ಕೂಲಿ ಕಾರ್ಮಿಕರಿಗೆ ಕಲ್ಪಿಸುವಂತೆ ತಿಳಿಸಿದರು.
ನಂತರ ಸಿಇಒ ಮೊಹಮ್ಮದ್ ಹ್ಯಾಸಿಸ್ ಮಾತನಾಡಿ, ದೂರದ ನಗರಗಳತ್ತ ಉದ್ಯೋಗ ಅರಸಿ ಹೋಗುವುದನ್ನು ತಡೆಯಲು ನರೇಗಾ ಉಪಯುಕ್ತವಾಗಿದ್ದು, ಪ್ರತಿಯೊಬ್ಬರು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು, ಕೂಲಿಕಾರಿಗೆ 100 ದಿನಗಳು ಕೆಲಸ ಮಾಡಿ, ತಮ್ಮ ತಮ್ಮ ಕುಟುಂಬಗಳು ಆರ್ಥಿಕವಾಗಿ ಸದೃಢರಾಗಬೇಕು. ಮತ್ತು ಜನರು ಬೇರೆ ಊರುಗಳಿಗೆ ಗುಳೆ ಹೋಗದೇ ತಮ್ಮ ತಮ್ಮ ಗ್ರಾಮಗಳಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿ ಆರ್ಥಿಕವಾಗಿ ಸಬಲರಾಗಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ಗುಳೆ ತಡೆಯುವ ನಿಟ್ಟಿನಲ್ಲಿ ನರೇಗಾ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಸದುಪಯೋಗ ಕೂಲಿ ಕಾರ್ಮಿಕರು ಪಡೆಯಬೇಕು. ಕೂಲಿ ಕೆಲಸಕ್ಕೆ ಬರುವವರಿಗೆ ಮಾತ್ರ ಹಾಜರಾತಿ ನೀಡಬೇಕು. ಹಿರಿಯ ನಾಗರಿಕರಿಗೆ ಹಾಗೂ ಗರ್ಭಿಣಿ ಮಹಿಳೆಯರಿಗೆ, ಮತ್ತು ವಿಶೇಷ ಚೇತನರಿಗೆ ಅರ್ಧದಷ್ಟು ಕೆಲಸ ಕಲ್ಪಿಸಿ. ಮನರೇಗಾ ಯೋಜನೆಯಡಿ ಕನಿಷ್ಠ 60% ಮಹಿಳೆಯರು ಭಾಗವಹಿಸಲು ಸೂಕ್ತ ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್. ಕೆ. ಶ್ರೀಕುಮಾರ್, ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್, ಪಿಡಿಒ ತಾರನಾಯ್ಕ, ಟಿಸಿ ಸಂಗಮೇಶ, ಟಿಎಇ ತಿಪ್ಪೇಶ್, ಬಿಎಫ್‌ಟಿ ಚನ್ನವೀರ, ಜಿಕೆಎಂ ಶಿಲ್ಪಾ, ಸಂಯೋಜಕ ಹನುಮೇಶ್ ಸೇರಿದಂತೆ ಗ್ರಾ. ಪಂ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ