ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕುರುಗೋಡು: ರೋಜ್ ಗಾರ್ ದಿವಸ್ ಆಚರಣೆ

ಬಳ್ಳಾರಿ: ಕುರುಗೋಡು ತಾಲ್ಲೂಕಿನ ದಮ್ಮೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ರೋಜ್ ಗಾರ್ ದಿವಸ್ ಅನ್ನು ಸೋಮವಾರ ಆಚರಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೇರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವ ಅಭಿವೃದ್ಧಿ ಹಾಗೂ ಗುಳೆ ತಪ್ಪಿಸಲು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ನರೇಗಾ ಯೋಜನೆ ರೂಪಿಸಲಾಗಿದೆ. ನರೇಗಾದಿಂದ ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಯಶಸ್ವಿಗೆ ಕಾರ್ಮಿಕರ ಶ್ರಮವೇ ಮೂಲಾಧಾರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕೂಲಿ ಕೆಲಸಕ್ಕೆ ಹಾಜರಾದವರಿಗೆ ಮಾತ್ರ ಹಾಜರಾತಿ ನೀಡಬೇಕು. ಹಿರಿಯ ನಾಗರಿಕರಿಗೆ ಹಾಗೂ ಗರ್ಭಿಣಿ ಮಹಿಳೆಯರಿಗೆ, ವಿಶೇಷ ಚೇತನರಿಗೆ ಅರ್ಧದಷ್ಟು ಕೆಲಸ ನೀಡುವಂತೆ ಮಾಹಿತಿ ನೀಡಿದರು.
ಮನರೇಗಾ ಯೋಜನೆಯಡಿ ಕನಿಷ್ಠ ಶೇ.60 ಮಹಿಳೆಯರು ಭಾಗವಹಿಸುವಿಕೆ, ಹಾಜರಾತಿ ಕುರಿತು ತಿಳಿಸಿದರು. ನಾಲಾ ಹೂಳೆತ್ತುವ ಕಾಮಗಾರಿಯ ಅಳತೆಯ ಕುರಿತು ವಿವರಿಸಿದ ಅವರು, ಮಹಿಳಾ ಕಾರ್ಮಿಕರು ಕೂಸಿನ ಮನೆಯ ಸದುಪಯೋಗ ಪಡೆಯಬೇಕು ಎಂದರಲ್ಲದೇ, ಪಿಎಂಜೆಜೆವೈ ಮತ್ತು ಪಿಎಂಎಸ್‌ಬಿವೈ ವಿಮಾ ಯೋಜನೆ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕುರುಗೋಡು ತಾಲ್ಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ನಿರ್ಮಲ, ಸಹಾಯಕ ನಿರ್ದೇಶಕ ಪಿ.ಶಿವರಾಮರೆಡ್ಡಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ಗ್ರಾಪಂ ಕಾರ್ಯದರ್ಶಿ, ತಾಂತ್ರಿಕ ಸಂಯೋಜಕರು, ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು ಬಿ.ಎಫ್.ಟಿ, ಗ್ರಾ.ಪಂ ಸಿಬ್ಬಂಧಿಯವರು ಹಾಜರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ