ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಹಲ್ಗಾಮ್ ಘಟನೆ ಖಂಡಿಸಿ ಮೌನ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ನಗರದಲ್ಲಿ ಮೇಣದ ಬತ್ತಿಯನ್ನು ಹಚ್ಚಿಕೊಂಡು ಮೌನ ಮೆರವಣಿಗೆ ನಡೆಸುವ ಮೂಲಕ ಅತ್ಯುಗ್ರವಾಗಿ ಖಂಡಿಸಲಾಯಿತು.
ಪಟ್ಟಣದ ಶ್ರೀ ಉದ್ಭವ ಮಹಾ ಗಣಪತಿ ದೇವಸ್ಥಾನದಿಂದ ಪ್ರಾರಂಭಗೊಂಡು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು. ವಿಶ್ವಹಿಂದು ಪರಿಷತ್, ಭಜರಂಗದಳ, ಭಾಜಪ ಹಾಗೂ ಸಂಘ ಪರಿವಾರದ ನೇತೃತ್ವದಲ್ಲಿ ಪೈಶಾಚಿಕ ಕುರಿತದಲ್ಲಿ ಪ್ರಾಣತ್ಯಾಗ ಮಾಡಿದವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಅವರ ಮೆರವಣಿಗೆ ನಡೆಸಿದರು ಪ್ರತಿಭಟನಾಕಾರರು ಎರಡು ನಿಮಿಷಗಳ ಕಾಲ ಮೌನಚರಣೆಯನ್ನು ಮಾಡಿದರು ವಿಶ್ವಹಿಂದ್ ಪರಿಷತ್ ಹಾಗೂ ಭಜರಂಗದಳದ ಪ್ರಮುಖರಾದ ಪುಟ್ಟಿ ಸಚಿನ್, ಇಂದ್ರಜಿತ್ ಸಿಂಗ್ , ಎಸ್. ಎನ್. ಗುರುಪ್ರಸನ್ನ , ಭಾಜಪ ಕ್ಷೇತ್ರ ಅಧ್ಯಕ್ಷ ಸಿ.ಡಿ. ಮಹಾದೇವ, ಮಾಜಿ ಅಧ್ಯಕ್ಷ ಅಳ್ಳಳ್ಳಿ ವೀರೇಶ್ ಪುರಸಭಾ ಸದಸ್ಯರಾದ ಡಾ. ವಿ. ಎಲ್. ಬಾಬು, ಎಸ್. ಎಂ. ನಾಗರಾಜ, ಎನ್. ರಾಮಾಂಜನೇಯಲು, ಟಿ.ವಿ. ಸುದರ್ಶನ್ ರೆಡ್ಡಿ, ಪಕ್ಷದ ಮುಖಂಡರಾದ ಮುರಳಿ ಮೋಹನ್ ರೆಡ್ಡಿ, ಜಿ.ಸುಧಾಕರ, ಪಿ. ಬ್ರಹ್ಮಯ್ಯ, ಆಗಳಿ ಪಂಪಾಪತಿ, ಡಿ. ಶ್ರೀಧರ ಶ್ರೇಷ್ಠಿ , ಚಂದ್ರಕಾಂತ್ ರೆಡ್ಡಿ, ಇಟಗಿ ವಿರುಪಾಕ್ಷಿ , ಮಾಜಿ ಶಾಸಕರ ಆಪ್ತ ವಿರೂಪಾಕ್ಷಯ್ಯ ಸ್ವಾಮಿ, ಶಿವಕುಮಾರ, ಭಾಜಪದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪುರಸಭಾ ಸದಸ್ಯರು, ವಿವಿಧ ಗ್ರಾಮಗಳ ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ