ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಸ್ಲಾಮಿಕ್ ಮನಸ್ಥಿತಿಯ ಕೃತ್ಯ ಖಂಡನೀಯ

ಕಲಬುರಗಿ: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ಮೇಲೆ ಏ. 22 ರಂದು ಉಗ್ರರು ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಇಸ್ಲಾಮಿಕ್ ಮನಸ್ಥಿತಿಯ ಉಗ್ರರು ಹಿಂದುಗಳ ಹೆಸರನ್ನು ಅವರನ್ನು ಗುಂಡೇಟಿನಿಂದ ಕೊಂದಿರುವುದು ಹೇಯ ಕೃತ್ಯವಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು ಭಯೋತ್ಪಾದಕರ ಈ ಭೀಕರ ದಾಳಿಯನ್ನು ಇಡೀ ದೇಶದ ಜನತೆ ಒಕ್ಕೊರಲಿನಿಂದ ಬಲವಾಗಿ ಖಂಡಿಸುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರಿಗೆ ತೀವ್ರ ಸಂತಾಪ ಸೂಚಿಸುತ್ತಾ ಗಾಯಗೊಂಡವರು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಈ ಘೋರ ಕೃತ್ಯದ ಹಿಂದಿರುವ ಎಲ್ಲಾ ದುಷ್ಟ ಶಕ್ತಿಗಳನ್ನು ಸದೆಬಡಿಯುವಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತರಾಗಬೇಕಾಗಿದೆ. ದೇಶ ರಕ್ಷಣೆಯ ವಿಚಾರದಲ್ಲಿ ಪಕ್ಷ, ಧರ್ಮಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಿ ರಾಷ್ಟ್ರದ ರಕ್ಷಣೆಗೆ ನಿಲ್ಲಬೇಕು. ಘಟನೆಯಿಂದ ಅಮಾಯಕರ ಜೀವಗಳನ್ನು ಬಲಿಯಾಗುವುದರೊಂದಿಗೆ ಅನೇಕ ಕುಟುಂಬಗಳನ್ನು ಧ್ವಂಸಗೊಂಡಿವೆ. ಇಂತಹ ಹಿಂಸಾಚಾರಗಳು ಸಂಪೂರ್ಣವಾಗಿ ಅಮಾನವೀಯವಾಗಿದ್ದು, ನ್ಯಾಯ, ಘನತೆ ಮತ್ತು ಶಾಂತಿಯನ್ನು ಬಯಸುವ ಸಮಾಜದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಹಿಂಸಾಚಾರದಿಂದ ಉಂಟಾಗುವ ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆಗುವ ಗಾಯವಾಗಿದೆ ಎಂದಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ