ಬಾಗಲಕೋಟೆ: ಡಾ|| ಬಾಬಾಸಾಹೇಬ ಅಂಬೇಡ್ಕರ ಕ್ರೀಡಾ, ಸಾಂಸ್ಕೃತಿಕ, ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ.), ನವನಗರ – ಬಾಗಲಕೋಟೆ ವತಿಯಿಂದ ಬಾಗಲಕೋಟೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವಾಗಿ ಎಮ್. ಆರ್. ಐ ಸ್ಕ್ಯಾನಿಂಗ್ ಮಷೀನ್ ಅಳವಡಿಸಿ ಆದಷ್ಟು ಬೇಗ ಎಂ. ಆರ್. ಐ ಸ್ಕ್ಯಾನ್ ಸೆಂಟರ್ ಪ್ರಾರಂಭಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಸ್ಪತ್ರೆಯಲ್ಲಿ ಎಂ. ಆರ್. ಐ ಸ್ಕ್ಯಾನ್ ಲಭ್ಯವಿಲ್ಲದ ಕಾರಣ ಜಿಲ್ಲೆಯ ಬಡ ರೋಗಿಗಳು ಹಲವು ವರ್ಷಗಳಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಎಮ್.ಆರ್.ಐ ಸ್ಕ್ಯಾನ್ ಮಾಡಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಬಡ ರೋಗಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಎಮ್.ಆರ್.ಐ ಸ್ಕ್ಯಾನ್ ಸೆಂಟರ್ ನ ಕಾಮಗಾರಿ ಚಾಲ್ತಿ ಹಂತದಲ್ಲಿದ್ದು ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ ಸ್ಕ್ಯಾನ್ ಸೆಂಟರ್ ಅನ್ನು ಪ್ರಾರಂಭಿಸಲು ನಮ್ಮ ಸಂಸ್ಥೆಯಿಂದ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿದೆ. ಸದರಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಬಡ ಜನರಿಗೆ ಅನೂಕೂಲ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ|| ಬಾಬಾಸಾಹೇಬ ಅಂಬೇಡ್ಕರ ಕ್ರೀಡಾ, ಸಾಂಸ್ಕೃತಿಕ, ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ.), ನವನಗರ-ಬಾಗಲಕೋಟೆಯ ಅಧ್ಯಕ್ಷರಾದ ಶ್ರೀಧರ ನೀಲನಾಯಕ, ಕಾರ್ಯದರ್ಶಿಗಳಾದ ಶ್ರೀಕಾಂತ ನೀಲನಾಯಕ, ಇಲಿಯಾಸ್ ಮಧರಖಂಡಿ, ಸಿದ್ದು ಪೂಜಾರಿ, ರವೀಂದ್ರ ಆಲೂರ, ಮಹಿಬೂಬ ಬೆಣ್ಣೂರ, ಲಖನ ರೋಖಡೆ, ಬಂದೇನವಾಜ ಬದಾಮಿ, ತೌಸಿಫ ಕೆರೂರ ಮತ್ತಿತರರು ಉಪಸ್ಥಿತರಿದ್ದರು.
- ಕರುನಾಡ ಕಂದ
