ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶೀಘ್ರದಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆರಂಭ – ಚನ್ನಬಸಪ್ಪ ಮುಧೋಳ್

ಯಾದಗಿರಿ/ ಗುರುಮಠಕಲ್: ಬಹು ದಿನಗಳ ಬೇಡಿಕೆ ಆಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕೊನೆಗೂ ಈಡೇರುವ ಕಾಲ ಕೂಡಿ ಬಂದಿದೆ, ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನಲ್ಲಿ ಹೊಸದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಿರುವ ಹಿನ್ನಲೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆರಂಭಿಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯ ಮಾನ್ಯ ಉಪ ನಿರ್ದೇಶಕರಾದ ಚನ್ನಬಸಪ್ಪ ಮುಧೋಳ್ ರವರು ಗುರುಮಠಕಲ್ ನಗರದ ಸರ್ಕಾರಿ ಕೇಂದ್ರ ಪ್ರಾಥಮಿಕ ಶಾಲೆ ವೀಕ್ಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮಾಡಲು ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ತಾಲೂಕಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅವಶ್ಯಕತೆ ಇದ್ದು, ಕಾರ್ಯಾಲಯಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯವನ್ನು ಪರಿಶೀಲನೆ ಕಾರ್ಯ ನಡೆದಿದೆ, ಶೀಘ್ರದಲ್ಲಿಯೇ ಪ್ರಾರಂಭವಾಗುವ ಭರವಸೆ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಷಯ ಪರಿವೀಕ್ಷಕರಾದ ಹನುಮಂತ, ಶಿಕ್ಷಣ ಸಂಯೋಜಕರಾದ ರವೀಂದ್ರ, ಬಾಲಪ್ಪ ಸಮೂಹ ಸಂಪನ್ಮೂಲ ವ್ಯಕ್ತಿ(CRP), ಸೈಯದ್ ಬಾಬಾ CRP, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷರಾದ ನಾರಾಯಣ ರೆಡ್ಡಿ,
ಮುಖ್ಯ ಗುರುಗಳಾದ ಹನುಮಂತ್ ರಾವ್ ರಾಮುಲು, ಶ್ರೀಮತಿ ಹೇಮಲತಾ, ಸಂಪತ್ ಕುಮಾರ್ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ