ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಮೃತರಾದವರಿಗೆ ಶ್ರದ್ಧಾಂಜಲಿ

ಬಳ್ಳಾರಿ / ಎಮ್ಮಿಗನೂರು : ಗ್ರಾಮದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿಜಮ್ಮು ಕಾಶ್ಮೀರದ ಪಹಲ್ಗಾಮ್ ಪ್ರವಾಸಿಗರ ಮೇಲೆ ನಡೆದ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿ. ಸದಾಶಿವಪ್ಪ ಮಾತನಾಡಿ ಉಗ್ರರನ್ನು ಮಟ್ಟ ಮಟ್ಟ ಹಾಕಲು ಪಕ್ಷಾತೀತವಾಗಿ ಪ್ರತಿಯೊಬ್ಬರೂ ಸರ್ಕಾರಕ್ಕೆ ಬೆಂಬಲವನ್ನು ಕೊಡಬೇಕು, ಪ್ರವಾಸಿ ತಾಣಗಳಿಗೆ ಪ್ರವಾಸಕ್ಕೆ ಹೋದವರ ಮೇಲೆ, ಅಮಾನುಷವಾಗಿ ಜೀವ ತೆಗೆಯುವ ಮಟ್ಟಕ್ಕೆ ಇಳಿದ ಭಯೋತ್ಪಾದಕರ ಹುಟ್ಟನ್ನು ಅಡಗಿಸುವ ಕೆಲಸ ತ್ವರಿತವಾಗಿ ಆಗಬೇಕು. ಈ ಕೃತ್ಯದಿಂದ ಪ್ರವಾಸಿಗರು ಪ್ರವಾಸ ತಾಣಗಳಿಗೆ ಹೋಗಲು ಹಿಂದೂ ಮುಂದು ಆಲೋಚಿಸಬೇಕಾಗುವ ವಾತಾವರಣ ಸೃಷ್ಟಿ ಆಗಲಿದೆ. ಸರ್ಕಾರದಿಂದ ಕೂಡಲೇ ಇದಕ್ಕೆ ಪ್ರತ್ಯುತ್ತರ ನೀಡಿ ಪ್ರವಾಸಿಗರಿಗೆ, ಭಾರತೀಯರಿಗೆ ಮುಕ್ತ ವಾತಾವರಣ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಬಕೆಂದು ಕೋರಿದರು.

ಅಲ್ಲದೆ ಗುಂಡಿಗೆ ಬಲಿಯಾದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ದುಃಖವನ್ನು ಬರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಲಾಯಿತು.

ಪೂರ್ವದಲ್ಲಿ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಜಿ. ನಾಗರೆಡ್ಡಿ ಎನ್ನು ಸೂಗಪ್ಪ ಎಚ್ ರುದ್ರಪ್ಪ ವೈ ಅಶ್ವಥ ರೆಡ್ಡಿ ಎಚ್. ಜಡ್ಯಪ್ಪ ರಂಗಪ್ಪ ದಶರಥ ರೆಡ್ಡಿ ಶಿವನೇಗೌಡರು ರಾಮಪ್ಪ ಬಡಿಗೇರ್ ವೀರೇಶ್ ಟಿ ರಾಮು ಶಿವರಾಮ ರೆಡ್ಡಿ ವಿರೇಶಪ್ಪ ಸೇರಿದಂತೆ ಮಕ್ಕಳು ಗ್ರಾಮಸ್ಥರು ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ