ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮದ ಕಾಳಮ್ಮ ದೇವಿ ಮಹೋತ್ಸವ : ವಿಶಿಷ್ಟ ಹರಕೆ ತೀರಿಸಿದ ಭಕ್ತರು : ಮೈಜುಮ್‌ ಎನಿಸಿದ ಹರಕೆ

ಬಳ್ಳಾರಿ / ಕಂಪ್ಲಿ : ಬೆನ್ನಿಗೆ ಶಸ್ತ್ರ ಹಾಕಿಕೊಂಡು ಗುಂಡು, ಆಟೋ, ತೇರು ಎಳೆರು, ಅಂತರಿಕ್ಷಾ (ರಾಕೇಟ್) ಮೂಲಕ ಜೋತು ಬಿದ್ದಿರುವುದು. ಹೀಗೆ ನೋಡುಗರ ಮೈಜುಮ್ ಎನ್ನಿಸುವಂತಹ ಹರಕೆ ಕಂಡು ಬಂತು.


ಸ್ಥಳೀಯ ಕೋಟೆ ಪ್ರದೇಶದ ಮೀನುಗಾರರ ಕಾಲೋನಿಯಲ್ಲಿ ಕಾಳಮ್ಮ ದೇವಿ ಮಹೋತ್ಸವ ಸಂಭ್ರಮದಿಂದ ಮಂಗಳವಾರ ಜರುಗಿತು.
ಇಲ್ಲಿನ ಮೀನುಗಾರರ ಆರಾಧ್ಯ ದೈವ ಕಾಳಮ್ಮ ದೇವಿ ಉತ್ಸವದ ನಿಮಿತ್ತ ಹರಕೆ ಹೊತ್ತ ಹಲವರು ದವಡೆಗೆ ಉದ್ದದ ಶಸ್ತ್ರ ಹಾಕಿಸಿಕೊಂಡು, ಬೆನ್ನಿಗೆ ಕಬ್ಬಿಣದ ಕೊಕ್ಕೆ ಸಿಕ್ಕಿಸಿಕೊಂಡು ಅದಕ್ಕೆ ನೈಲಾನ್‌ ಹಗ್ಗ ಕಟ್ಟಿ ಏಳು ಜನ ಹಂತಿ ಗುಂಡು ಎಳೆದರು. ನಾಲ್ವರು ಆಟೋ, ಒಬ್ಬರು ಸಣ್ಣ ರಥ ಎಳೆದರೆ, ಒಬ್ಬರು ಗುಂಡು ಎಳೆದು, ಇಬ್ಬರು ಟ್ರ್ಯಾಕ್ಟರ್‌ ಟ್ರ್ಯಾಲಿಯಲ್ಲಿ ಬಿದಿರಿನ ಮಂಟಪ ಮಾಡಿ, ಅದರಲ್ಲಿ ಬೆನ್ನಿಗೆ ಮತ್ತು ತೊಡೆಗೆ ಕೊಕ್ಕೆ ಸಿಕ್ಕಿಸಿಕೊಂಡು ಅದಕ್ಕೆ ನೈಲಾನ್‌ ಹಗ್ಗ ಕಟ್ಟಿ ಇಳಿ ಬಿದ್ದು ಹರಕೆ ತೀರಿಸಿದರು. ಬಿರು ಬಿಸಿಲಿನಲ್ಲಿ ಹರಕೆ ಹೊತ್ತವರು ಹಂತಿ ಗುಂಡು ಸೇರಿದಂತೆ ಹಲವು ವಾಹನಗಳನ್ನು ಸ್ವಲ್ಪ ದೂರದ ಗಾಳೆಮ್ಮ ದೇಗುಲದವರೆಗೆ ಎಳೆದುಕೊಂಡು ಹೋದರು. ಮೂವರು ಮಹಿಳೆಯರು ಶಸ್ತ್ರ ಹಾಕಿಕೊಂಡರು. ಪೊಂಬೆಗಾರರಾದ ಸಿ.ಚಿನ್ನಸ್ವಾಮಿ, ಸಿ.ರಾಮಕೃಷ್ಣ ಇವರು ಭಕ್ತರಿಗೆ ಶಸ್ತ್ರ ಹಾಕಿಸಲು ಉಮ್ಮಸ್ಸು ತುಂಬಿದರು.ಇದನ್ನು ರಸ್ತೆ ಅಕ್ಕ ಪಕ್ಕದಲ್ಲಿ ಜನ ನಿಂತು ಆಶ್ಚರ್ಯದಿಂದ ವೀಕ್ಷಿಸಿದರು. ಉತ್ಸವದ ನಿಮಿತ್ತ ದೇಗುಲದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಈ ವೇಳೆ ಮೀನುಗಾರರ ಸಂಘದ ತಾಲೂಕು ಅಧ್ಯಕ್ಷ ಎಂ.ರಾಜಶೇಖರ, ಗುರುಮೂರ್ತಿ (ಪೂಜಾರಿ), ಮಾರಿಯಪ್ಪ, ಕೃಷ್ಣ ಮೂರ್ತಿ, ಗಣೇಶ, ಸಾಮ್ ದರ್, ಮಣಿಯಪ್ಪ, ಚಿನ್ನರಾಜು, ಪಿ.ಪಂಪಾಪತಿ ಹಾಗೂ ಇಲ್ಲಿನ ಮೀನುಗಾರರ ಸಂಘದ ಸದಸ್ಯರು ಹಾಗೂ ಮುಖಂಡರು ಉತ್ಸವದಲ್ಲಿ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ