ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರತಿ ಎಕರೆಗೆ ಸುಮಾರು 30ರಿಂದ 40 ಸಾವಿರ ರೂ. ನಷ್ಟ ಪರಿಹಾರ ನೀಡಿ : ರಾಜುನಾಯಕ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾ.ಪಂ ವ್ಯಾಪ್ತಿಯ ಸೋಮಲಾಪುರ ಗ್ರಾಮದಲ್ಲಿ ಕಳೆದ ದಿನದಂದು ಸುರಿದ ಅಕಾಲಿಕ ಆಲಿಕಲ್ಲು ಮಳೆ, ಗಾಳಿಗೆ ನೆಲಕಚ್ಚಿದ ರೈತರ ಭತ್ತದ ಹೊಲಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜುನಾಯಕ ಭಾನುವಾರ ಭೇಟಿ ನೀಡಿ, ಪರಿಶೀಲಿಸುವ ಜತೆಗೆ ರೈತರಿಗೆ ಸಾಂತ್ವನ ಹೇಳಿದರು.
ಇಲ್ಲಿನ ಭಾಗದಲ್ಲಿ ಸುಮಾರು 200 ಎಕರೆಯಷ್ಟು ಭತ್ತ ಬೆಳೆಯು ನಾಶವಾಗಿದ್ದು, ರೈತರು ಸಾಲದ ಸುಳಿಗೆ ಸಿಲುಕುವಂತ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ರೈತರ ಸಂಕಷ್ಟವನ್ನು ಅರಿತು, ಪ್ರತಿ ಎಕರೆಗೆ ಸುಮಾರು 30ರಿಂದ 40 ಸಾವಿರ ರೂ. ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸುವ ಜತೆಗೆ ಜೆಡಿಎಸ್ ಪಕ್ಷವು ರೈತರ ಬೆನ್ನೆಲುಬಾಗಿ ನಿಂತಿದ್ದು, ದೃತಿಗೆಡದೇ ಧೈರ್ಯದಿಂದಿರಬೇಕು ಎಂದು ರಾಜುನಾಯಕ ತಿಳಿಸಿದರು.
ಇಲ್ಲಿನ ರೈತರ ಹೊಲಗಳಿಗೆ ಭೇಟಿ ನೀಡಿ, ಸಂಕಷ್ಟವನ್ನು ಆಲಿಸಿ, ಬೆಳೆ ನಷ್ಟ ಪರಿಹಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಮಿನಳಿ ತಾಯಣ್ಣ, ಕಂಪ್ಲಿ ತಾಲೂಕ ಅಧ್ಯಕ್ಷ ಮೇಘರಾಜ್, ಪ್ರಧಾನ ಕಾರ್ಯದರ್ಶಿ ಜಗದೀಶ್, ನಾಗರಾಜ್, ವಿರುಪಾಕ್ಷಿ, ರೈತರಾದ ರುದ್ರಪ್ಪ, ಶಿವಪ್ಪ, ಹನುಮಂತಪ್ಪ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ