ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಮಿಕ ದಿನಾಚರಣೆ ಪ್ರಯುಕ್ತ ಜೆಸ್ಕಾಂ ಲೈನ್ ಮ್ಯಾನ್ ಗಳಿಗೆ ಸನ್ಮಾನ

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ: ತಾಲೂಕಿನ ಕೋಗಳಿ ತಾಂಡದ ಜೆಸ್ಕಾಂ ವತಿಯಿಂದ ಕಛೇರಿಯಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು ,

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಆರ್ ರವರು ಮಾತನಾಡಿ ಹಗಲು ರಾತ್ರಿ ಎನ್ನದೆ ತಮ್ಮ ಜೀವವನ್ನು ಲೆಕ್ಕಿಸದೇ ನಮಗೆ ಬೆಳಕನ್ನು ನೀಡುವ ಕರೆಂಟ್ ಲೈನ್ ಮ್ಯಾನ್ ಗಳಿಗೆ ನಾವು ಮೊದಲು ಗೌರವವನ್ನು ನೀಡಬೇಕು, ಹಗಲು ರಾತ್ರಿ ಎನ್ನದೇ ಕೆಲಸವನ್ನು ಮಾಡುವ ಹಿಂದೆ ಎಷ್ಟೋ ಲೈನ್ ಮ್ಯಾನ್ ಗಳು ತಮ್ಮ ಜೀವವನ್ನು ಕಳೆದುಕೊಂಡಿರುವ ಅಂತಹ ಹಲವಾರು ಘಟನೆ ನಡೆದುಹೋಗಿವೆ, ಹಾಗಾಗಿ ಇವಾಗ ನಮ್ಮ ಕಣ್ಣ ಮುಂದೆ ಕೆಲಸ ಮಾಡುತ್ತಿರುವ ಲೈನ್ ಮ್ಯಾನ್ ಗಳಾದ ಹನುಮಂತಪ್ಪ, ನಿಂಗಪ್ಪ ರವರಿಗೆ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕ ಕೋಗಳಿ ತಾಂಡದ ವತಿಯಿಂದ ಸನ್ಮಾನಿಸಲಾಯಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಘಟಕದ ಪ್ರಧಾನ ಕಾರ್ಯದರ್ಶಿ ದೇವರ ಮನಿ ನಿಂಗಪ್ಪ, ಸಂಘಟನೆ ಕಾರ್ಯದರ್ಶಿ ಕುಮಾರ್ ನಾಯ್ಕ ಸದಸ್ಯರುಗಳಾದ ಉಮೇಶ್ ಕೆ ಬಿ ಶರ್ವಣ್ ಕುಮಾರ್ ದುರ್ಗಾ ನಾಯ್ಕ್, ಸತೀಶ್ ನಾಯ್ಕ್ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ