ಶಿರಸಿ; ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ
ದಿ. 30/04/2025, ಬುಧವಾರ,ವೈಶಾಖ ಶುದ್ಧ ತದಿಗೆ “ಅಕ್ಷಯ ತೃತೀಯಾ”ದಂದು ರಥವನ್ನು ರಥದ ಮನೆಯಿಂದ ಹೊರತುರುವ ಕಾರ್ಯ ನೆರವೇರಿತು.
ರಥಕ್ಕೆ ಇರುವ ಗಣಪತಿ ಮತ್ತು ಗರುಡ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯದಲ್ಲಿ ಎಲ್ಲಾ ಕಾರ್ಯಕ್ರಮಗಳು ನಡೆಯಿತು.
ಇಂದಿನಿಂದ ಶ್ರೀ ಲಕ್ಷ್ಮಿ ನರಸಿಂಹ ರಥೋತ್ಸವದ ಅಂಗವಾಗಿ ರಥವನ್ನು ಸಿದ್ಧಪಡಿಸುವ ಕಾರ್ಯ ನಡೆಯುತ್ತದೆ.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
