ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಯಕ ಭಕ್ತಿ ಮಾರ್ಗದಿಂದ ಮಾನವನ ಪ್ರಗತಿ ಸಾಧ್ಯ:ಡಾ.ಚಿ.ಸಿ.ನಿಂಗಣ್ಣ

ಕಲಬುರಗಿ: ವಿಶ್ವಗುರು ಬಸವಣ್ಣನವರ ಪ್ರಯತ್ನದಿಂದ ವೈಚಾರಿಕ ಕ್ರಾಂತಿ ಜರುಗಿದ್ದರಿಂದ ಲಿಂಗಭೇದ ತಾರತಮ್ಯ, ಅನಿಷ್ಠ ಪದ್ಧತಿಗಳು ನಿರ್ಮೂಲನೆ ಆಗಿವೆ,ಕಾಯಕ ಭಕ್ತಿ ದಾಸೋಹ ಮಾರ್ಗದಿಂದ ಮನುಷ್ಯನು ಪ್ರಗತಿ ಸಾಧಿಸಲು ಸಾಧ್ಯ ಎಂದು ಸಾಹಿತಿ,ಶರಣ ಚಿಂತಕರಾದ ಡಾ.ಚಿ.ಸಿ.ನಿಂಗಣ್ಣ ಹೇಳಿದರು.
ನಗರದ ಜಯನಗರ ಶಿವ ಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಜಯನಗರ ಶಿವಮಂದಿರದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ 892ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ಬಸವಣ್ಣ ವಿಚಾರ ಸಂಕೀರಣದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಬಸವಣ್ಣನವರು ಸಮಾನತೆ ಸಮಾಜ ನಿರ್ಮಾಣ ಆಗಬೇಕೆಂದು ಕನಸು ಕಂಡಿದ್ದರು.ಸಮೋಜದಲ್ಲಿ ಸಾಮಾಜಿಕ, ಆರ್ಥಿಕ, ಆಧ್ಯಾತ್ಮಿಕ, ಸಾಂಸ್ಕೃತಿಕವಾಗಿ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಬಸವಣ್ಣನವರ ಬಯಕೆಯಾಗಿತ್ತು. ಪ್ರತಿಯೊಬ್ಬ ಕನ್ನಡಿಗನು ಬಸವಣ್ಣನವರ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸಬೇಕು.ಆಧುನಿಕ ಜೀವನ ಶೈಲಿಗೆ ಮಾರು ಹೋಗದೆ ತಮ್ಮ ಕುಟುಂಬದಿಂದಲೇ ಬಸವ ತತ್ವವನ್ನು ಆಚರಣೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದ ಅವರು ಸರಕಾರವೇ ಎಲ್ಲವನ್ನು ಮಾಡಲಾರದು, ಸಂಘ ಸಂಸ್ಥೆಗಳು ಬಸವಣ್ಣನವರ ಆಚಾರ ವಿಚಾರ ಕುರಿತು ಸಮಾಜಕ್ಕೆ ತಿಳಿಸುವ ಕೆಲಸ ಮಾಡಬೇಕು ಪ್ರತಿಯೊಬ್ಬರೂ ಹಣೆಯ ಮೇಲೆ ವಿಭೂತಿ ಧರಿಸಬೇಕು ಎಂದು ಅವರು ಕರೆ ಕೊಟ್ಟರು.
ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ಚಿಂತಕ ಮಲ್ಲಣ್ಣ ನಾಗರಾಳ ಅವರು ಮಾತನಾಡಿ, ಸಮಾನತೆ ಮೂಡಬೇಕಾದರೆ ಮೇಲು, ಕೀಳು, ಜಾತಿ ಇವೆಲ್ಲವೂ ತೊಲಗಿಸಿದರೆ ಮಾತ್ರ ನಾವು ಬಸವಣ್ಣನವರಿಗೆ ನಿಜವಾದ ಗೌರವ ಸಲ್ಲುತ್ತದೆ ಎಂದರು. ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸದಸ್ಯರಾದ ಎಂ.ಡಿ.ಮಠಪತಿ, ಬಸವರಾಜ ಅನ್ವರಕರ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ವಾಲಿ ಮಾತನಾಡಿದರು.ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಂಡೆಪ್ಪ ಕೇಸೂರ, ಸಿದ್ಧಲಿಂಗ ಗುಬ್ಬಿ, ಬಸವರಾಜ ಮಾಗಿ, ಭೀಮಾಶಂಕರ ಶೆಟ್ಟಿ,ಗುರುಪಾದಪ್ಪ ಕಾಂತಾ, ನಾಗರಾಜ ಖೂಬಾ, ಎಸ್.ಡಿ.ಸೇಡಂಕರ, ವೀರಪ್ಪ ಹುಡುಗಿ, ಮಲ್ಲಯ್ಯ ಸ್ವಾಮಿ ಗಂಗಾಧರ ಮಠ, ಪರಮೇಶ್ವರ್ ಹಡಪದ, ಅಮೀತ ನಾಗನಹಳ್ಳಿ, ಮಲ್ಲಯ್ಯ ಸ್ವಾಮಿ ಬೀದಿಮನಿ, ಮಹಿಳಾ ಘಟಕದ ಸದಸ್ಯರಾದ ಅನುರಾಧ ಕುಮಾರಸ್ವಾಮಿ, ಸುಜಾತಾ ಭೀಮಳ್ಳಿ, ಸುಷ್ಮಾ ಮಾಗಿ,ಲತಾ ತುಪ್ಪದ ಸೇರಿದಂತೆ ಬಡಾವಣೆಯ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ