ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಾಣಿಪಾಕ್ಷಿಗಳಿಗೆ ನೀರುಣಿಸುವ ಮೂಲಕ ಬಸವಣ್ಣನವರ ಮಾರ್ಗದಲ್ಲೇ ವನಸಿರಿ ತಂಡ ಸಾಗುತ್ತಿದೆ : ವನಸಿರಿ ಅಮರೇಗೌಡ ಮಲ್ಲಾಪುರ

ರಾಯಚೂರು ಜಿಲ್ಲೆಯ ಸಿಂಧನೂರಿನ 3ನೇ ಮೈಲ್‌ಕ್ಯಾಂಪ್ ಕರಿಬಸವ ನಗರದ ಶ್ರೀ ರಂಭಾಪುರಿ ಖಾಸಾ ಶಾಖಾಮಠದಲ್ಲಿ ವನಸಿರಿ ಫೌಂಡೇಷನ್, ಜಂಗಮ ಕ್ಷೇಮಾಭಿವೃದ್ಧಿ ಸಂಘ ಹಾಗೂ ಚತುರ್ವೇದ ಪುರೋಹಿತ ಬಳಗದ ವತಿಯಿಂದ ಶ್ರೀ ಷ.ಬ್ರ.ಸೋಮನಾಥ ಶಿವಾಚಾರ್ಯರರ ಆಶೀರ್ವಾದದೊಂದಿಗೆ 4ನೇ ವರ್ಷದ ಜೈವಿಕ ಸಂಸ್ಕಾರ ಶಿಬಿರದಲ್ಲಿ ಬಸವ ಜಯಂತಿ ಅಂಗವಾಗಿ ವನಸಿರಿ ಪೌಂಡೇಷನ್ ವತಿಯಿಂದ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇವೇಳೆ ಮಾತನಾಡಿದ ವನಸಿರಿ ಫೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ದಯವಿಲ್ಲದ ಧರ್ಮವದೇವುದಯ್ಯಾ, ದಯವಿರಬೇಕು ಬೇಕು ಸಕಲ ಪ್ರಾಣಿಗಳಲ್ಲಿ ದಯವೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣವರ ಮಾತಿನಂತೆ ನಮ್ಮ ಮುಂದಿನ ಪೀಳಿಗೆಗೆ ಪಕ್ಷಿ ಸಂಕುಲ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ.ಪ್ರಾಣಿಪಾಕ್ಷಿಗಳಿಗೆ ನೀರುಣಿಸುವ ಮೂಲಕ ಬಸವಣ್ಣನವರ ಮಾರ್ಗದಲ್ಲೇ ವನಸಿರಿ ತಂಡ ಸಾಗುತ್ತಿದೆ. ಪ್ರತಿಯೊಬ್ಬರೂ ಪ್ರಾಣಿಪಾಕ್ಷಿಗಳ ಮೇಲೆ ದಯೇ ತೋರಬೇಕು. ಇತ್ತೀಚಿನ ದಿನಗಳಲ್ಲಿ ಪ್ರಾಣಿಪಾಕ್ಷಿಗಳು ಅಳಿವಿನ ಅಂಚಿನಲ್ಲಿವೆ.ಬೇಸಿಯಲ್ಲಿ ನೀರು ಸಿಗಲಾರದೆ ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ. ಮುಂದಿನ ಪೀಳಿಗೆಗೆ ಪಕ್ಷಿ ಸಂಕುಲ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ತಮ್ಮ ಸುತ್ತಮುತ್ತಲಿನ ಗಿಡಮರಗಳಿಗೆ, ಮನೆಯ ಮೇಲ್ಚಾವಣಿ ಮೇಲೆ ನೀರಿನ ಅರವಟ್ಟಿಗೆಗಳನ್ನು ಇಟ್ಟು ಪ್ರಾಣಿಪಾಕ್ಷಿಗಳಿಗೆ ನಿರುಣಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಈ ಸಂಧರ್ಭದಲ್ಲಿ ಚನ್ನಪ್ಪ ಕೆ ಹೊಸಹಳ್ಳಿ, ಮುದುಕಪ್ಪ ಹೊಸಳ್ಳಿ ಕ್ಯಾಂಪ್, ಶಿಬಿರದ ವಿದ್ಯಾರ್ಥಿಗಳು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ