ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬರೋಬ್ಬರಿ 95 ವರ್ಷಗಳ ಬಳಿಕ ದೇಶದಾದ್ಯಂತ ಜಾತಿ ಗಣತಿ ಕೇಂದ್ರ ಸರ್ಕಾರದ ನಿರ್ಧಾರ

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ.

ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ ಗಣತಿ ನಡೆಯುತ್ತಿರುವುದು ಇದೇ ಮೊದಲು. 1931ರ ಜನಗಣತಿಯ ನಂತರ ಜಾತಿ ಗಣತಿಯನ್ನು ಕೈಬಿಡಲಾಗಿತ್ತು. ಜಾತಿ ಗಣತಿಯ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಬುಧವಾರವೇ ‘ಸಮರ’ ಆರಂಭವಾಗಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. ಆದರೆ, ಈಗಾಗಲೇ ವಿಳಂಬವಾಗಿರುವ ಜನಗಣತಿಯ ವೇಳಾಪಟ್ಟಿಯನ್ನು ಸರ್ಕಾರ ಪ್ರಕಟಿಸಿಲ್ಲ. ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಮೃತಪಟ್ಟ ಒಂದು ವಾರದ ಬಳಿಕ ಹಾಗೂ ಬಿಹಾರದ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಕೇಂದ್ರ ಸರ್ಕಾರ ಜಾತಿ ಗಣತಿಯ ದಾಳ ಉರುಳಿಸಿದೆ.

​ಕಾಂಗ್ರೆಸ್‌ ಸೇರಿದಂತೆ ಐಎನ್‌ಡಿಐಎ ಮೈತ್ರಿಕೂಟದ ಪಕ್ಷಗಳು ದೇಶಾದ್ಯಂತ ಜಾತಿ ಗಣತಿ ನಡೆಸಬೇಕೆಂದು ಸರಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದವು. ಕರ್ನಾಟಕ, ಬಿಹಾರ, ತೆಲಂಗಾಣವು ಜಾತಿ ಗಣತಿ ಸ್ವರೂಪದ ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದವು. ಬಿಹಾರ ಚುನಾವಣೆ ಹೊಸ್ತಿಲಲ್ಲೇ ಜನಗಣತಿಯಲ್ಲಿಜಾತಿ ಗಣತಿಯನ್ನೂ ಸೇರಿಸುವ ನಿರ್ಧಾರ ಪ್ರಕಟಿಸಿದ ಸರಕಾರದ ನಿಲುವಿನ ಹಿಂದೆ ರಾಜಕೀಯ ಲೆಕ್ಕಾಚಾರವಿದೆ ಎನ್ನಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ