ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಚಾರಿತ್ರಿಕ ಐಸಿರಿಯ ಕಂಪ್ಲಿಯ ಸೋಮೇಶ್ವರ ಜಾತ್ರಾ ಮಹೋತ್ಸವ

ಬಳ್ಳಾರಿ / ಕಂಪ್ಲಿ :ಪಟ್ಟಣದ ಆರಾಧ್ಯ ದೇವರಾದ ಶ್ರೀ ಸೋಮೇಶ್ವರ ಮಹಾರಥೋತ್ಸವ ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಬೆಳಿಗ್ಗೆ ಶ್ರೀ ಸೋಮೇಶ್ವರ ಶಿಲಾಮೂರ್ತಿಗೆ ವಿವಿಧ ಅಭಿಷೇಕಗಳು, ನೈವೇದ್ಯ ಸಮರ್ಪಣೆ ಮತ್ತು ಮಹಾಮಂಗಳಾರತಿಯ ನಂತರ ಮಡಿ ತೇರನ್ನು ಎಳೆಯಲಾಯಿತು. ಸಂಜೆ ವಿವಿಧ ಜಾನಪದ ಕಲಾತಂಡಗಳು, ಮಂಗಳ ವಾದ್ಯಗಳೊಂದಿಗೆ ರಥದಲ್ಲಿ ಶ್ರೀ ಸೋಮೇಶ್ವರ ರಥೋತ್ಸವಕ್ಕೆ ಚಾಲನೆ ನೀಡಿದರು.

ರಥವು ರಾಜಬೀದಿಯಲ್ಲಿ ಸಾಗಿ ಅಲ್ಲಿಂದ ಪುನಃ ದೇವಸ್ಥಾನಕ್ಕೆ ತಲುಪಿತು.

ಮಹಾರಥೋತ್ಸವದಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ ಪಾಲ್ಗೊಂಡು ದೇವರ ಆಶೀರ್ವಾದವನ್ನೂ ಪಡೆದು ಮಾತನಾಡಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಸೋಮೇಶ್ವರ ಸಭಾ ಭವನವನ್ನು ನಿರ್ಮಾಣ ಮಾಡುವದಾಗಿ ತಿಳಿಸಿದ್ದರು.

ಶ್ರೀ ಸೋಮೇಶ್ವರ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಪಟ್ಟಣ, ಗ್ರಾಮಗಳ ವಿವಿಧ ಸಮಾಜಗಳ ಮುಖಂಡರು ಹಾಗೂ ಸದ್ಭಕ್ತರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ