ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ ಲೆಕ್ಕಾಚಾರ, ಅನಿರೀಕ್ಷಿತ ತಿರುವು

ಕೊಪ್ಪಳ/ ಗಂಗಾವತಿ : ಕರ್ನಾಟಕದ ‘ಭತ್ತದ ಕಣಜ’ ಎಂದೇ ಕರೆಯಲಾಗುವ ಗಂಗಾವತಿಯಲ್ಲಿ 1989, 1994 ಹಾಗೂ 1999ರ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಶ್ರೀರಂಗದೇವರಾಯಲು ಸತತ ಮೂರು ಬಾರಿ ಜಯಗಳಿಸಿ ದಾಖಲೆ ಬರೆದರು.
2004ರಿಂದ ಹೊಸ ತಲೆಮಾರು ರಾಜಕೀಯ ಪ್ರವೇಶ ಮಾಡಿತು. ಅಂದಿನಿಂದ ಕ್ಷೇತ್ರದಲ್ಲಿ ಇಕ್ಬಾಲ್‌ ಅನ್ಸಾರಿ ಮತ್ತು ಪರಣ್ಣ ಈಶ್ವರಪ್ಪ ಮುನವಳ್ಳಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಒಮ್ಮೆ ಇಕ್ಬಾಲ್‌ ಅನ್ಸಾರಿ ಗೆದ್ದರೆ, ಮತ್ತೊಮ್ಮೆ ಪರಣ್ಣ ಈಶ್ವರಪ್ಪ ಮುನವಳ್ಳಿ ಗೆಲ್ಲುತ್ತಾ ಬರುತ್ತಿದ್ದಾರೆ. ಲಿಂಗಾಯತರ ಪ್ರಾಬಲ್ಯದ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯೊಬ್ಬರು ಗೆದ್ದಿರುವುದು ವಿಶೇಷವಾಗಿದೆ.

ಕಳೆದ 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಫುಟ್‌ಬಾಲ್‌ ಆಡಿ ಜನಾರ್ಧನ ರೆಡ್ಡಿ ಗೆಲವು ಸಾಧಿಸಿದರು.

ಅದರೆ ಈಗ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಈ ತೀರ್ಪಿನಿಂದಾಗಿ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದ್ದು, 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ಆಗಿರುವುದರಿಂದ ಜೈಲು ಸೇರುವುದು ಖಚಿತವಾಗಿದೆ.

ಜಾಮೀನಿಗಾಗಿ ಹೈದರಾಬಾದ್​ನ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕು, ಹೈಕೋರ್ಟ್ ಜಾಮೀನು ನೀಡುವವರೆಗೆ ಜೈಲಿನಲ್ಲಿರಬೇಕು.

ಹೈಕೋರ್ಟ್ ಜಾಮೀನು ನೀಡದಿದ್ದ ಪಕ್ಷದಲ್ಲಿ ಈಗ ನೀಡಿರುವ ತೀರ್ಪಿನ ಪ್ರಕಾರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆ ಇದೆ. ಹೀಗಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ.

ಜನಾರ್ದನ ರೆಡ್ಡಿ ಸ್ಥಾಪಿತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಯಿಂದ ಗೆದ್ದು ಮಾತೃ ಪಕ್ಷವಾದ ಬಿಜೆಪಿಗೆ ಮರಳಿದ್ದರು.

ಒಂದು ವೇಳೆ ಶಾಸಕ ಸ್ಥಾನ ರದ್ದಾದರೆ ? ಮುಂದಿನ ಚುನಾವಣೆಗೆ ಈಗನಿಂದಲೇ ರಾಜಕೀಯ ಲೆಕ್ಕಾಚಾರ ಗರಿ-ಗದರಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ