ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಿಯಾಯತಿ ದರದಲ್ಲಿ ವಿವಿಧ ಮಾದರಿಯ ಬಿತ್ತನೆ ಬೀಜಗಳ ವಿತರಣೆ

ವಿಜಯನಗರ / ಹೊಸಪೇಟೆ : ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ವತಿಯಿಂದ ವಲಯದ ರೈತರಿಗಾಗಿ ರಿಯಾಯತಿ ದರದಲ್ಲಿ ವಿವಿಧ ಮಾದರಿಯ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು.

ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್. ಆರ್. ಗವಿಯಪ್ಪ ರವರು ಹೊಸಪೇಟೆಯ ಎ. ಪಿ. ಎಂ. ಸಿ ಯಾರ್ಡ್ ನಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ ರೈತರಿಗೆ ಬಿತ್ತನೆ ಬೀಜಗಳು ಹಾಗೂ ಕೃಷಿ ಪರಿಕರಗಳ ವಿತರಿಸಿ ಮಾತನಾಡಿ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಭೂಮಿಗೆ ಬೇಕಾಗುವ ಅಗತ್ಯ ಬೀಜಗಳನ್ನು ಇಲಾಖೆಯು ಈಗಾಗಲೇ ಸರಬರಾಜು ಮಾಡುತ್ತಿದೆ ಎಲ್ಲಾ ರೈತರು ಮುಂಗಾರು ಬಿತ್ತನೆಗೆ ಖರೀದಿಸಬಹುದು ವಲಯದ ರೈತರಿಗಾಗಿ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ, ಶರಣಪ್ಪ ಮುದಗಲ್, ಉಪ ನಿರ್ದೇಶಕರಾದ ನಹಿಮ್ ಪಾಷಾ, ಸಹಾಯಕ ನಿರ್ದೇಶಕರಾದ ಮನೋಹರ್ ಗೌಡ ರವರು ಸೇರಿದಂತೆ ಇಲಾಖೆ ಸಿಬ್ಬಂದಿ ವರ್ಗದವರು, ರೈತರು, ಮುಖಂಡರುಗಳು, ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ