ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಣತಿದಾರರಿಗೆ ನಿಖರ ಮಾಹಿತಿ ನೀಡುವುದು ಪ್ರತಿ ಕುಟುಂಬದ ಜವಾಬ್ದಾರಿ

ಚಾಮರಾಜನಗರ/ ಹನೂರು: ಮೇ 5ರಿಂದ ಆರಂಭವಾಗಿರುವ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಬಲಗೈ ಸಮುದಾಯದವರು ಹೊಲೆಯಾ ಎಂದು ಮತ್ತು ಎಡಗೈ ಸಮುದಾಯದವರು ತಮ್ಮನ್ನು ಮಾದಿಗ ಎಂದು ದಾಖಲೆಗಳಲ್ಲಿ ಸ್ಪಷ್ಟವಾಗಿ ನಮೂದಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನೆಯ ಸಂಚಾಲಕ ನಂಜುಂಡ ಮೌರ್ಯ ತಿಳಿಸಿದ್ದಾರೆ.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಮನೆ ಮನೆಗೆ ಬರುವ ಗಣತಿದಾರರಿಗೆ ನಿಖರ ಮಾಹಿತಿ ನೀಡುವುದು ಪ್ರತಿ ಕುಟುಂಬದ ಜವಾಬ್ದಾರಿಯಾಗಿದೆ‌.
ಈ ಕೆಲಸವನ್ನು ಯಾರೂ ನಿರ್ಲಕ್ಷ್ಯ ಮಾಡದೆ, ಮನೆಯ ಬಳಿ‌ ಗಣತಿದಾರರು ಬರುವ ಮೊದಲು ಅಗತ್ಯ ದಾಖಲೆಗಳನ್ನು ಒಂದು ಕಡೆ ಸಂಗ್ರಹಿಸಿ, ಸರಿಯಾದ ವಿವರಗಳನ್ನು ನೀಡಬೇಕು,” ಎಂದು ಬಲಗೈ ಮತ್ತು ಎಡಗೈ ಸಮುದಾಯದವರಲ್ಲಿ ಮನವಿ ಮಾಡಿದರು.

ವಿಶ್ವಜ್ಞಾನಿ ಟ್ರಸ್ಟ್ ಅಧ್ಯಕ್ಷರಾದ ತಳ ಶಾಸನ ಮೋಹನ್ ರವರು ಮಾತನಾಡಿಈ ಸಮೀಕ್ಷಾ ಕಾರ್ಯ ಎಡಗೈ ಮತ್ತು ಬಲಗೈ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಿದ್ದು, ಮನೆ ಮನೆಗೆ ಗಣತಿ ಸಮೀಕ್ಷೆಗೆ ಅಧಿಕಾರಿಗಳು ಬಂದ ಸಂದರ್ಭದಲ್ಲಿ ಗ್ರಾಮದ ಮುಖಂಡರು ಯುವಕರು ಯುವತಿಯರು ಅವರನ್ನು ಪ್ರೀತಿ ವಿಶ್ವಾಸದಿಂದ ಮಾತನಾಡಿಸಿ ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಸರ್ಕಾರದ ಜೊತೆಗೆ ಕೈಜೋಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ರಮೇಶ್ ಬೊಮ್ಮನಗದ್ದೆ, ಪಳನಿಸ್ವಾಮಿ ಶ್ರೀರಂಗಪಟ್ಟಣ, ವೀರನ್ ಒಡಕೆ ಹಳ್ಳ, ಮಂಜುಳಾ ಸಂಪಿಗಾ ಹಾಜರಿದ್ದರು.

ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ