ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಣಾಪೂರ ಗ್ರಾಮದಲ್ಲಿ ವಾಸವಿ ಜಯಂತಿ ಆಚರಣೆ

ಕೊಪ್ಪಳ/ ಗಂಗಾವತಿ: ತಾಲೂಕಿನ ಡಣಾಪೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಜಯಂತಿಯನ್ನು ಪೂರ್ಣ ಕುಂಭದೊಂದಿಗೆ ಅಮ್ಮನವರನ್ನು ಡಣಾಪೂರ ಗ್ರಾಮದ ಆರಾದ್ಯ ದೈವವಾಗಿರುವ ಶ್ರೀ ಮಾರುತೇಶ್ವರ ದೇವಸ್ಥಾನದಿಂದ ರಾಜ ಬೀದಿಯಲ್ಲಿ ಶ್ರೀ ಎದುರು ಮಾರುತೇಶ್ವರ ದೇವಸ್ಥಾನದವರೆಗೆ ಸಕಲ ವಾದ್ಯವೃಂದದಿಂದ ಹಾಗೂ ಭಕ್ತಿ ಹಾಡುಗಳನ್ನು ಭಜನೆ ಮುಖಾಂತರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರೆಗೆ ಮೆರವಣಿಗೆ ಸಾಗಿತು. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀವಾಸವಿ ಕನ್ನಿಕಾ ಪರಮೇಶ್ವರಿಗೆ ವಿಶೇಷ ಪೂಜಾ ಕಾರ್ಯಕ್ರಮದೊಂದಿಗೆ ವಾಸವಿ ಜಯಂತಿಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.

ಈ ವೇಳೆಯಲ್ಲಿ ಶ್ರೀ ವಾಸವಿ ಯುವ ಜನ ಸಂಘ ಡಣಾಪುರದ ಮುತ್ತುರಾಜ ಶೆಟ್ಟಿ , ಗುರುರಾಜ ಶಟ್ಟಿ , ಪ್ರಹ್ಲಾದ್ ಶಟ್ಟಿ ,ರಾಘವೇಂದ್ರ ಪೂರ್ಮ , ಕೆ ಎಸ್ ರಾಜು ಶಟ್ಟಿ , ವೀರೇಶ ಪೂರ್ಮ , ದತ್ತು ಅಯೋದ್ಯ , ಸುರೇಶ ಶಟ್ಟಿ ಹೆಬ್ಬಾಳ , ಶ್ರೀನಿವಾಸ ಶಟ್ಟಿ , ವಿಶ್ವನಾಥ ಪೂರ್ಮ ಸೇರಿದಂತೆ ಇತರರು ಭಾಗಿಯಾಗಿದ್ದರು.

ವರದಿ : ಹನುಮೇಶ ಭಾವಿಕಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ