ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗಡಿ ಗ್ರಾಮದ 4.2 ಕಿಲೋಮೀಟರ್ ರಸ್ತೆಯ ಮರು ಡಾಂಬರೀಕರಣಕ್ಕೆ ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆ ಅಡಿಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲು ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ
ಗಡಿಭಾಗದ ಗೋಪಿನಾಥಂ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ, ಹಲವಾರು ವರ್ಷಗಳಿಂದ ರಸ್ತೆ ಅಭಿವೃದ್ಧಿಯಾಗದೆ ಗಡಿ ಗ್ರಾಮವು ಬಹು ಬೇಡಿಕೆಯ ಗ್ರಾಮಸ್ಥರ ಒತ್ತಾಯದ ಮೇರೆಗೆ ಒಂದು ಕೋಟಿ ವೆಚ್ಚದಲ್ಲಿ ಮೊದಲ ಹಂತದಲ್ಲಿ ರಸ್ತೆಯ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಉಳಿದಿರುವ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಗಡಿ ಗ್ರಾಮದ ವಿವಿಧ ಗ್ರಾಮಗಳಿಗೂ ವಿಸ್ತರಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಎಂ. ಆರ್ .ಮಂಜುನಾಥ್ ತಿಳಿಸಿದರು.

ನಂತರ ಗೋಪಿನಾಥಮ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಕೆರೆ, ಕೋಟಿ, ಕಾಲುವೆ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಇದಲ್ಲದೆ ಗೋಪಿನಾಥಮ್ ಗ್ರಾಮದಲ್ಲಿ ನೂತನ ಆಸ್ಪತ್ರೆ ಸ್ಥಾಪನೆ ಸರ್ವೇ ನಂ 51/1 ರಲ್ಲಿ ಒಟ್ಟು 5.50 ಎಕರೆ ಇದ್ದು ಇದರಲ್ಲಿ ಸುಮಾರು 2ಎಕರೆ ಜಾಗದಲ್ಲಿ ಅಸ್ಪತ್ರೆ ಸ್ಥಾಪನೆ ಮಾಡಲು ಸ್ಥಳ ನಿಗದಿ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಎಇಇ ಅಭಿಲಾಷ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ನಾಗರಾಜ್ ರೆಡ್ಡಿ, ಸದಸ್ಯರಾದ ಸೋಮುನಾಯಕ, ಮಾಜಿ ಗ್ರಾಂ.ಪ ಅಧ್ಯಕ್ಷರಾದ ಗೋವಿಂದರಾಜು, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಜ, ಗ್ರಾಂ.ಪಂ. ಅಭಿವೃದ್ಧಿ ಅಧಿಕಾರಿ ರಾಜ್ ಕುಮಾರ್, ಮುಖಂಡರುಗಳಾದ ಜಯರಾಮ್ ರೆಡ್ಡಿ, ಪೆರುಮಾಳ್, ಡಿಕೆ ರಾಜು, ಡಿ ಆರ್ ಮಾದೇಶ್, ಜಯರಾಮು, ವೆಂಕಟೇಶ್, ಸುರೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ