ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಣ್ಣನವರ ತತ್ವಾದರ್ಶಗಳು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪ

ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿನ ಅಸಮಾನತೆ ವಿರೋಧಿಸಿ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಮಹಾನ್ ಮಾನವತಾವಾದಿ ಬಸವಣ್ಣನವರ ತತ್ವಾದರ್ಶಗಳು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಘಟಕಾಧಿಕಾರಿ ಕೆ.ಹೊನ್ನೂರವಲಿ ಹೇಳಿದರು.
ಇಲ್ಲಿನ ಗೃಹ ರಕ್ಷಕದಳದ ಕಛೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿವಶರಣ ಬಸವಣ್ಣನವರ ಜಯಂತಿಯಲ್ಲಿ ಮಾತನಾಡಿ, ಕಾಯಕವೇ ಕೈಲಾಸ ಎನ್ನುವ ತತ್ವದಲ್ಲಿ ಕಾಯಕ ನಿಷ್ಠೆಗೆ ಪ್ರಾಧಾನ್ಯತೆ ನೀಡಿ ಪ್ರತಿಯೊಬ್ಬರಲ್ಲೂ ವತ್ತಿ ಗೌರವ ಬೆಳೆಸಿದ ಕೀರ್ತಿಯೂ ಕಾಯಕ ಯೋಗಿ ಬಸವಣ್ಣನವರಿಗೆ ಸಲ್ಲುತ್ತದೆ. ಬಸವಣ್ಣನವರು ಮನುಕುಲದ ಶ್ರೇಯಸ್ಸಿಗಾಗಿ ಅವಿರತ ಹೋರಾಟ ನಡೆಸುವ ಮೂಲಕ ಸಮಾನತೆಯ ಸಾಮಾಜಿಕ ಕ್ರಾಂತಿಯನ್ನು ಜನಮಾನಸದಲ್ಲಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ತತ್ವ, ಆದರ್ಶಗಳು ಇಂದಿಗೂ ಜನ ಮಾನ್ಯತೆಯನ್ನು ಪಡೆದುಕೊಳ್ಳುತ್ತಿವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಘಟಕಾಧಿಕಾರಿ ಹೆಚ್. ಗಿರಿಧರ, ಲೀಡರ್ ಕೆ. ಸುರೇಶ ಸೇರಿದಂತೆ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ