ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಯ ಭರವಸೆ ನೀಡಿದ ಶಾಸಕ ಗಣೇಶ

ಬಳ್ಳಾರಿ / ಕಂಪ್ಲಿ : ಪಿಂಜಾರ್ ನದಾಫ್ ಸಮುದಾಯವು ಬಹಳಷ್ಟು ಹಿಂದುಳಿದ್ದು, ಅಭಿವೃದ್ಧಿಗಾಗಿ ಸಿ.ಎಂ ಗಮನಕ್ಕೆ ತಂದು, ಪಿಂಜಾರ್ ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಪಿಂಜಾರ್ ನದಾಫ್ ಸಂಘದ ಕಂಪ್ಲಿ ತಾಲೂಕು ಘಟಕದಿಂದ ಅಂಜುಮನ್ ಖಿದ್ಮತೆ ಎ ಇಸ್ಲಾಂ ಸಮಿತಿ ಹಾಗೂ ಜೆಸಿಐ ಕಂಪ್ಲಿ ಸೋನಾ ವತಿಯಿಂದ ಹೊಸಪೇಟೆ ಬೈಪಾಸ್ ರಸ್ತೆಯ ಹಿಂದೂಸ್ತಾನ ಗಾರ್ಡನ್ ಪೈಲ್ವಾನ್ ರಂಜಾನ್ ಸಾಬ್ ವೇದಿಕೆಯಲ್ಲಿ ಆಯೋಜಿಸಿದ್ದ ಉಚಿತ ಮುಸ್ಲಿಂ ಸಾಮೂಹಿಕ ವಿವಾಹದಲ್ಲಿ ಸಹಯೋಗದಲ್ಲಿ ಭಾನುವಾರ ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯ ಪೈಲ್ವಾನ್ ರಂಜಾನ್ ಸಾಬ್ ವೇದಿಕೆಯಲ್ಲಿ ಆಯೋಜಿಸಿದ್ದ ಉಚಿತ ಮುಸ್ಲಿಂ ಸಾಮೂಹಿಕ ವಿವಾಹದಲ್ಲಿ ಮುಸ್ಲಿಂ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಸಜ್ಜಾದೆ ನಸೀನ್ ಖಾದ್ರಿ ಅವರ ದಿವ್ಯ ಸಾನಿಧ್ಯದಲ್ಲಿ ನವ ವಸಂತಕ್ಕೆ ಕಾಲಿಟ್ಟ ಐದು ಜೋಡಿಗಳಿಗೆ ಆಶೀರ್ವದಿಸಿ ಮತ್ತು ವೇದಿಕೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಂಪ್ಲಿ, ಕುರುಗೋಡು, ಎಮ್ಮಿಗನೂರು ಸೇರಿದಂತೆ ನಾನಾ ಕಡೆಗಳಲ್ಲಿ ಶಾದಿ ಮಹಾಲ್ ನಿರ್ಮಾಣಕ್ಕೆ ಅತಿ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪಿಂಜಾರ್ ನದಾಫ್ ಸಮುದಾಯ ಹಿಂದುಳಿದ್ದು, ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಲಾಗುವುದು. ಸಿಎಂ ಗಮನಕ್ಕೆ ತಂದು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಮೀಸಲಿಸಲಾಗುವುದು. ಸಮಾಜದ ಬದಲಾವಣೆಗೆ ಶಿಕ್ಷಣ ಅತಿ ಮುಖ್ಯವಾಗಿದೆ. ಒಳ್ಳೆಯ ಶಿಕ್ಷಣದೊಂದಿಗೆ ಸಮಾಜವನ್ನುಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ಹೊಸ ಜೀವನಕ್ಕೆ ಕಾಲಿಟ್ಟ ಜೋಡಿಗಳು, ಅತ್ತೆ, ಮಾವ, ತಂದೆ, ತಾಯಿಯನ್ನು ಚನ್ನಾಗಿ ನೋಡಿಕೊಂಡು, ಹೊಂದಾಣಿಕೆ ಮೂಲಕ ಸುಂದರ ಬದುಕು ನಡೆಸಿಕೊಂಡು ಹೋಗುವ ಜವಾಬ್ದಾರಿ ತಮ್ಮದಾಗಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ, ಭವಿಷ್ಯದ ಉತ್ತಮ ಪ್ರಜೆಯನ್ನಾಗಿ ರೂಪಿಸಬೇಕು ಎಂದರು.
ಪಿಂಜಾರ್ ನದಾಫ್ ಸಂಘದ ತಾಲೂಕು ಅಧ್ಯಕ್ಷ ಒ.ಎಸ್.ದಾದಾಸಾಬ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಇದೇ ಮೊದಲ ಬಾರಿಗೆ ಪ್ರತಿಯೊಬ್ಬರ ಸಹಕಾರದಿಂದ ಉಚಿತ ಮುಸ್ಲಿಂ ಸಾಮೂಹಿಕ ಮದುವೆ ಕಾರ್ಯಕ್ರಮ ಯಶಸ್ವಿ ಮಾಡಲಾಗಿದೆ. ಇದೇ ತೆರನಾಗಿ ಮುಂದಿನ ಸಮಾಜ ಸೇವಾ ಕಾರ್ಯ ಮತ್ತು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಸ್ಲಿಂ ಧರ್ಮಗುರುಗಳಾದ ಸೈಯದ್ ಷಾ ಖಾಜಾ ಮುಹಿನೂದ್ದಿನ್ ಖಾದರಿ ಸೈಯದ್ ನೂರು ಖಾದರಿ ರೈಸ್ ಸಾಹೇಬ್, ನೂರ್ ಸಾಹೇಬ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ಲೊಡ್ಡು ಹೊನ್ನುರವಲಿ, ಪಿಂಜಾರ್ ನದಾಫ್ ಸಂಘದ ರಾಜ್ಯಾಧ್ಯಕ್ಷ ಹೆಚ್.ಜಲೀಲ್ ಸಾಬ್, ಉಪಾಧ್ಯಕ್ಷರಾದ ಹಾಜಿ ಜಿ.ಡಿ.ನದಾಫ್, ಮೌಲಾಸಾಬ್, ಪ್ರಧಾನ ಕಾರ್ಯದರ್ಶಿ ರಿಯಾಜ ಸಲೀಮ ನಾಗ್ತೆ, ಅಂಜುಮನ್ ಖಿದ್ಮತೆ ಎ ಇಸ್ಲಾಂ ಸಮಿತಿ ಅಧ್ಯಕ್ಷ ಪೆಂಟರ್ ಮಸ್ತಾನ್, ಅಬ್ದುಲ್ ಕಲಾಂ ಟ್ರಸ್ಟ್ ಅಧ್ಯಕ್ಷ ಅಕ್ಕಿ ಜಿಲಾನ್, ಜೆಸಿಐ ಸೋನಾ ಅಧ್ಯಕ್ಷ ಬಿ.ರಸೂಲ್, ಪಿಂಜಾರ್ ಸಂಘದ ತಾಲೂಕು ಪ್ರ.ಕಾರ್ಯದರ್ಶಿ ಕೆ.ರಾಜಾವಲಿ, ಮುಖಂಡರಾದ ಬಿ.ನಾರಾಯಣಪ್ಪ, ಕೆ.ಷಣ್ಮುಖಪ್ಪ, ವಾಹೀದ್, ಮೆಹಮೂದ್, ಬಾವಿಕಟ್ಟೆ ಮೆಹಬೂಬ್ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ