ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮ ಒತ್ತುವರಿ ನೆಪದಲ್ಲಿ ತೆರವು

ಶಿವಮೊಗ್ಗ: ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು, ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದರು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಈ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಲಾಯಿತು.

ಇದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಈ ಕುರಿತು ಗಂಭೀರವಾಗಿ ಗಮನ ಹರಿಸಿ, ತಕ್ಷಣ ಪರಿಶೀಲನೆ ನಡೆಸಿ, ದೇವಾಲಯವನ್ನು ಮರುಸ್ಥಾಪಿಸಲು ಹಾಗೂ ಭಕ್ತರ ಭಾವನೆಗಳಿಗೆ ತಕ್ಕಂತೆ ನ್ಯಾಯ ಸಿಗುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ “ಸಮುದಾಯದ ಧಾರ್ಮಿಕ ನಂಬಿಕೆಗಳು ಮತ್ತು ಸಂಸ್ಕೃತಿಯ ಪ್ರಾಮುಖ್ಯತೆಯನ್ನು ಗೌರವಿಸುವಂತೆ ಅಧಿಕಾರಿಗಳು ನಡೆದುಕೊಳ್ಳಬೇಕು. ಯಾವುದೇ ಅಭಿವೃದ್ಧಿ ಅಥವಾ ವ್ಯವಸ್ಥಾಪನಾ ಕ್ರಮಗಳು ಜನಭಾವನೆಗಳಿಗೆ ತಾಕಿಲ್ಲದೆ ಜಾರಿಗೆ ಬರಬೇಕು” ಎಂದು ತಿಳಿ ಹೇಳಲಾಯಿತು.

ಭೇಟಿಯ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ, ತಹಸೀಲ್ದಾರ್‌, ತುಂಗಾ ಮೇಲ್ದಂಡೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ