ಬಳ್ಳಾರಿ / ಕಂಪ್ಲಿ : ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಒಂದು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ ತಹಶೀಲ್ದಾರ್ ಆಗಿ ಮಂಜುನಾಥ ಅಧಿಕಾರ ವಹಿಸಿಕೊಂಡರು. ಶಿವರಾಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಮಂಜುನಾಥ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮಂಜುನಾಥ ನಾಯಕ ಮಾತನಾಡಿ, ಈ ಹಿಂದೆ ಬಳ್ಳಾರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿರುವೆ. ಕೆಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಇಲ್ಲಿನ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಚೇರಿಯ ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು.
ಇಲ್ಲಿನ ಸಿಬ್ಬಂದಿ ವರ್ಗದವರು ನೂತನ ತಹಶೀಲ್ದಾರರಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವರಾಜ ಶಿವಪುರ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಶಿರಸ್ತೇದಾರರಾದ ಪಂಪಾಪತಿ, ರಮೇಶ ಸೇರಿದಂತೆ ಸಿಬ್ಬಂದಿ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್
