ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಹಶೀಲ್ದಾರ್ ಮಂಜುನಾಥ ನಾಯಕ ಅಧಿಕಾರ ಸ್ವೀಕಾರ

ಬಳ್ಳಾರಿ / ಕಂಪ್ಲಿ : ಸ್ಥಳೀಯ ತಹಶೀಲ್ದಾರ್ ಕಛೇರಿಯಲ್ಲಿ ನೂತನ ತಹಶೀಲ್ದಾರ್ ಆಗಿ ಮಂಜುನಾಥ ನಾಯಕ ಇವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಒಂದು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿತ್ತಿದ್ದ ಶಿವರಾಜ ಶಿವಪುರ ಇವರ ಜಾಗಕ್ಕೆ ನೂತನ ತಹಶೀಲ್ದಾರ್ ಆಗಿ ಮಂಜುನಾಥ ಅಧಿಕಾರ ವಹಿಸಿಕೊಂಡರು. ಶಿವರಾಜ ಅವರಿಗೆ ಯಾವುದೇ ಸ್ಥಳವನ್ನು ತೋರಿಸಿಲ್ಲ. ಮಂಜುನಾಥ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮಂಜುನಾಥ ನಾಯಕ ಮಾತನಾಡಿ, ಈ ಹಿಂದೆ ಬಳ್ಳಾರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿರುವೆ. ಕೆಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವಿದೆ. ಇಲ್ಲಿನ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಚೇರಿಯ ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ತಿಳಿಸಿದರು.
ಇಲ್ಲಿನ ಸಿಬ್ಬಂದಿ ವರ್ಗದವರು ನೂತನ ತಹಶೀಲ್ದಾರರಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವರಾಜ ಶಿವಪುರ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಶಿರಸ್ತೇದಾರರಾದ ಪಂಪಾಪತಿ, ರಮೇಶ ಸೇರಿದಂತೆ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ