ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಆಯ್ಕೆಯಾದ ನಿರ್ದೇಶಕರಿಗೆ ಸನ್ಮಾನ

ಹನೂರು: ಪಟ್ಟಣದ ಕೃಷಿ ಪತ್ತಿನ ಸಹಕಾರ ಚುನಾವಣೆ ಬುಧವಾರ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು. ಇದರಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಕೆ. ರಾಜೂಗೌಡ, ಎಸ್.ಲಿಂಗೇಗೌಡ, ರಂಗಸ್ವಾಮಿ ನಾಯ್ಡು ಟಿ.ಎಸ್. ಮಾದೇಶ್ ನಿರ್ದೇಶಕರುಗಳಾಗಿ ಆಯ್ಕೆಯಾದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಶಾಸಕ ಎಂ. ಆರ್. ಮಂಜುನಾಥ ಹಾಗೂ ಬಿಜೆಪಿ ಮುಖಂಡ ದತ್ತೇಶ್ ಕುಮಾರ್ ಅವರು ಸನ್ಮಾನ ಮಾಡಿದರು.

ಮೊದಲ ಬಾರಿಗೆ ಸಂಘಕ್ಕೆ ಚುನಾವಣೆ:

ಶಾಸಕ ಎಂಆರ್ ಮಂಜುನಾಥ್ ಅವರು ಮಾತನಾಡಿ ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 15 ವರ್ಷದಿಂದಲೂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಸ್ಥಾನಗಳಿಗೆ ಈವರೆಗೂ ಚುನಾವಣೆ
ನಡೆದಿರಲಿಲ್ಲ. ಹಿಂದೆ ಇದ್ದವರು ಕೃಷಿ ಪತ್ತಿನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯನ್ನು ನಡೆಸುತ್ತಿರಲಿಲ್ಲ, ನಾವುಗಳು ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡವು ಈ ಚುನಾವಣೆಯಲ್ಲಿ ಜನರು ಯಾವುದೇ ರೀತಿಯ ಹಣ ಆಮಿಷಗಳಿಗೆ ಒಳಗಾಗದೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ 5 ಜನರು ನಿರ್ದೇಶಕರಾಗಿ ಗೆದ್ದಿದ್ದಾರೆ. ಈ ಚುನಾವಣೆ ಗೆಲವು ಮುಂದಿನ ಚುನಾವಣೆಗೆ ದಿಕ್ಸೂಚಿ ಆಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ದತ್ತೇಶ್ ಕುಮಾರ್, ರಾಮಪುರ ಬಿಜೆಪಿ ಮಂಡಲ ಅಧ್ಯಕ್ಷ ರಾಜು, ಮುಖಂಡರಾದ ಸಿಂಗನಲ್ಲೂರು ರಾಜಣ್ಣ, ವಿಜಯ್ ಕುಮಾರ್, ಅಮೀನ್, ಗೋವಿಂದ, ವೆಂಕಟೇಶ್, ಕೃಷ್ಣ, ಸತೀಶ್, ಸೇರಿದಂತೆ ಗೆಲುವು ಸಾಧಿಸಿದ ಸದಸ್ಯರು ಹಾಗೂ ಶಾಸಕರ ಅಭಿಮಾನಿ ಬಳಗದವರು ಇದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ