ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

ಬಳ್ಳಾರಿ / ಎಮ್ಮಿಗನೂರ : ಬೇಸಿಗೆ ರಜೆಯ ಸಮಯದ ಸದುಪಯೋಗ ಪಡಿಸಿಕೊಳ್ಳಲು ಮಕ್ಕಳಿಗೆ ತರಬೇತಿ ಶಿಬಿರವು ಸಹಾಯಕವಾಗುತ್ತದೆ ಎಂದು ಪಿಡಿಒ ಲಕ್ಷ್ಮಣ್ ತರುಣಾಯಕ್ ತಿಳಿಸಿದರು.
ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 15 ದಿನಗಳ ಬೇಸಿಗೆ ತರಬೇತಿ ಶಿಬಿರದ ಸಮಾರೋಪದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ ಮಕ್ಕಳು ರಜೆಯಲ್ಲಿ ಎಲ್ಲೆಂದರಲ್ಲಿ ಓಡಾಡಿ ಆರೋಗ್ಯ ಕಳೆದುಕೊಳ್ಳುವುದಕ್ಕಿಂತ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಈ ತರಬೇತಿ ಶಿಬಿರಗಳು ಸಹಾಯಕವಾಗುತ್ತವೆ ಎಂದರು.

ನಂತರ ಸ್ವಯಂ ಸೇವಕ ಶಿವನೇಗೌಡರ ರಾಮಪ್ಪ ಮಾತನಾಡಿ ಸರ್ಕಾರ ಮುಂದಿನ ದಿನಮಾನಗಳಲ್ಲಿ ಹೆಚ್ಚಿನ ದಿನಗಳ ಕಾಲ ತರಬೇತಿ ಶಿಬಿರವನ್ನು ನಡೆಸಲು ಅನುವು ಮಾಡಿಕೊಡುವುದರ ಜೊತೆಗೆ ಇನ್ನಷ್ಟು ಸಂಪನ್ಮೂಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಲು ಸಹಕಾರ ನೀಡಬೇಕು ಎಂದರು.

ಈ ವೇಳೆ ಸುಮಾರು 30 ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ದೊಡ್ಡಬಸಪ್ಪ, ಶಿಕ್ಷಕ ಎಸ್. ರಾಮು, ದಂತಪಾಲಕ ಉಮೇಶ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ