ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ಗಡಿ ಭಾಗದಲ್ಲಿ ಬಸ್ ಜೀಪ್ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

ಗುರುಮಠಕಲ್/ ನಾರಾಯಣಪೇಟೆ :
ಗುರುಮಠಕಲ್ ಪಟ್ಟಣದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿರುವ ನೆರೆಯ ತೆಲಂಗಾಣ ರಾಜ್ಯ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಬಳಿ ಇಂದು ಶನಿವಾರ ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದೆ. ನಾರಾಯಣಪೇಟೆ ಜಿಲ್ಲೆಯ ಸಿರಿಶಾ (10) ಮತ್ತು ಗುರುಮಠಕಲ ತಾಲೂಕ ಶಿವಪುರದ ಹನುಮಂತಿ (50) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನಾರಾಯಣಪೇಟೆಯಿಂದ ಕರ್ನಾಟಕಕ್ಕೆ ಬರುತ್ತಿದ್ದ ಕರ್ನಾಟಕ ಕೆಆರ್‌ಟಿಸಿ ಬಸ್, ತಿರುವಿನಲ್ಲಿ ಸುಮಾರು 6 ಪ್ರಯಾಣಿಕರೊಂದಿಗೆ ಗಾಜರಕೊಟ ನಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಜೀಪಿನಲ್ಲಿದ್ದ ಸಿರಿಷಾ ಮತ್ತು ಹನುಮಂತಿ ಸಾವನ್ನಪ್ಪಿದ್ದಾರೆ.

ನಾರಾಯಣಪೇಟೆ ಪೊಲೀಸರ ತಂಡ ಅಪಘಾತದ ಸ್ಥಳಕ್ಕೆ ಧಾವಿಸಿ, ಅಪಘಾತಕ್ಕೆ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಾರಾಯಣಪೇಟೆ ಜಿಲ್ಲಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ