ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚರಂಡಿ ನೀರು ಮನೆಗಳ ಒಳಗೆ ಹೋದರೂ ಕಣ್ಣು ಮುಚ್ಚಿ ಕುಳಿತ ಪಿಡಿಓ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿರಶ್ಯಾಡ ಸಾರ್ವಜನಿಕರು ಆರೋಗ್ಯಕರ ಜೀವನ ನಡೆಸಲು ಅಗತ್ಯವಾಗಿ ಬೇಕಿರುವ ಮೂಲಸೌಕರ್ಯಗಳಲ್ಲಿ ಒಂದಾದ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ನಾಗರಿಕರು ತೀವ್ರ ತೊಂದರೆಗೆ ಸಿಲುಕಿ, ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಜನತೆ ಕಂಗಾಲಾಗಿದ್ದಾರೆ.

ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಚರಂಡಿಗಳಲ್ಲಿ ಕೊಳಚೆ ನೀರು ಒಂದಿಂಚು ಮುಂದಕ್ಕೆ ಹರಿದು ಹೋಗುತ್ತಿಲ್ಲ, ಕೊಳಚೆ ನೀರಿನ ದುರ್ನಾತಕ್ಕೆ ನಿವಾಸಿಗಳು ಮೂಗು ಮುಚ್ಚಿಕೊಂಡು ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ, ಶ್ರೀ ಬಸವೇಶ್ವರ ದೇವಸ್ಥಾನ ಮುಂದಗಡೆ ಇರುವ ಚರಂಡಿ ಸ್ವಚ್ಚತೆ ಮಾಯವಾಗಿರುವ ಕಾರಣ ಪ್ರತಿನಿತ್ಯವೂ ನರಕಯಾತನೆ ಅನುಭವಿಸುವಂತಾಗಿದೆ.

ರಾತ್ರಿಯಾದರೆ ಸೊಳ್ಳೆಗಳ ಕಾಟ, ತಿನ್ನುವ ಆಹಾರಕ್ಕೂ ಹುಳಗಳ ಕಾಟ ತಾಳಲಾರದೆ ಬೇಸತ್ತಿದ್ದಾರೆ. ಚರಂಡಿ ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ. ಈ ಕಾರಣಕ್ಕೆ ಪಟ್ಟಣದ ಜನರು ವ್ಯವಸ್ಥೆಯ ವಿರುದ್ಧ ಪ್ರತಿನಿತ್ಯ ಆಕ್ರೋಶ ಹೊರಹಾಕುತ್ತಿದ್ದಾರೆ.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ