ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಂಗಾವತಿ: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಸಾವು.!

ಕೊಪ್ಪಳ/ ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.
ಮೃತ ಬಾಲಕರು ಗಂಗಾವತಿಯ 17ನೇ ವಾಡ್೯ನ ಪವನ್ ಕುಮಾರ ತಂದೆ ಶರಣಪ್ಪ ಕಟ್ಟಿಮನಿ (14) ಹಾಗೂ ಬಹದ್ದೂರ ಬಂಡಿ ಗ್ರಾಮದ ಗೌತಮ್ ತಂದೆ ನಾಗರಾಜ (15) ಎಂದು ತಿಳಿದು ಬಂದಿದೆ. ಸಂಬಂಧಿಕರ ಮನೆಯಲ್ಲಿ ಮದುವೆ ಕಾರ್ಯ ಮುಗಿಸಿ ಪೂಜಾ ಸಾಮಾಗ್ರಿಗಳನ್ನು ನದಿಗೆ ಬಿಟ್ಟು ಪೂಜೆಯನ್ನು ಸಲ್ಲಿಸಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.
ಕುಟುಂಬಸ್ಥರು ಪೂಜೆ ಸಲ್ಲಿಸುವ ಸಮಯದಲ್ಲಿ ಬಾಲಕರು ಈಜಾಡಲು ಹೋಗಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ನೀರಿನಲ್ಲಿ ಮುಳುಗಿ ಕೆಲ ಗಂಟೆಗಳು ಕಳೆದರೂ ಕುಟುಂಬಸ್ಥರಿಗೆ ವಿಷಯ ತಿಳಿದಿಲ್ಲ. ಪೂಜೆಯ ನಂತರ ಬಾಲಕರು ಕಾಣದಿದ್ದಾಗ ಹುಡುಕಾಟ ನಡೆಸಿದ್ದಾರೆ. ನಂತರ ನದಿಯಲ್ಲಿರುವ ಗುಂಡಿಯಲ್ಲಿ ಬಾಲಕರು ಮುಳುಗಿರುವುದು ತಿಳಿದು ಬಂದಿದೆ. ಸ್ಥಳೀಯ ಮೀನುಗಾರರು ತಕ್ಷಣ ಓವ೯ ಬಾಲಕ ಪವನಕುಮಾರನನ್ನು ಹೊರ ತೆಗೆದಿದ್ದು, ಇನ್ನೊವ೯ ಬಾಲಕನ ನಾಪತ್ತೆಯಾಗಿದ್ದು ಇನ್ನೂ ದೊರೆಯದ ಕಾರಣ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಹಲವು ವಷ೯ಗಳಿಂದ ಮರಳು ತೆಗೆಯಲು ಗುಂಡಿಗಳನ್ನು ತೆಗೆಯಲಾಗಿದೆ. ಆ ಗುಂಡಿಗಳಲ್ಲಿಯೇ ಬಾಲಕರು ಮುಳುಗಿ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ