ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ತಂತಿ ಸ್ಪರ್ಶಿಸಿ ಮೂರು ಎಮ್ಮೆಗಳು ಸಾವು

ಬಳ್ಳಾರಿ / ಕಂಪ್ಲಿ : ಮಳೆಯ ಆವಾಂತರದಿಂದಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂರು ಎಮ್ಮೆಗಳು ಸ್ಥಳದಲ್ಲೇ ಜೀವತೆತ್ತ ಘಟನೆ ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ಸೂಗಪ್ಪ ಎಂಬುವರ ಹೊಲದಲ್ಲಿ ಬಿ.ಮಲಿಕ್ ಬೀ ಎಂಬುವರು ಮೂರು ಎಮ್ಮೆಗಳನ್ನು ಮೇಯಿಸಲು ಬಿಟ್ಟಿದ್ದರು. ನಂತರ ಬಂದ ಮಂಗಳವಾರ ಸುರಿದ ಮಳೆ ಗಾಳಿಯ ರಭಸಕ್ಕೆ ಹೊಲದ ಬಳಿಯಲ್ಲಿದ್ದ ಟಿ.ಸಿ ಮೋಟರ್‌ನ ವೈರ್ ಕಳಚಿ ಬಿದ್ದದ್ದರಿಂದ ಮೂರು ಎಮ್ಮೆಗಳು ಅಸುನೀಗಿವೆ. ಬಿ.ಮಲಕ್ ಬೀ ಎಂಬುವರಿಗೆ ಸೇರಿದ ಸುಮಾರು 270000 ರೂ.ಗಳ ಮೌಲ್ಯದ ಮೂರು ಎಮ್ಮೆಗಳು ಮೃತಪಟ್ಟಿದ್ದು, ಸಂಕಷ್ಟಕ್ಕ ಈಡಾಗಿದ್ದಾರೆ. ಆದ್ದರಿಂದ ಸರ್ಕಾರ ನಷ್ಟ ಪರಿಹಾರ ಒದಗಿಸಬೇಕೆಂಬುದು ಮಾಲೀಕರ ಮತ್ತು ಗ್ರಾಮಸ್ಥರ ಒತ್ತಾಯವಾಗಿದೆ.
ಪಶು ಇಲಾಖೆಯ ಪಶುವೈದ್ಯಾಧಿಕಾರಿ ಕೆ.ಬಸವರಾಜ ಇವರು ಘಟನಾ ಸ್ಥಳಕ್ಕೇ ಭೇಟಿ ನೀಡಿ, ಪರಿಶೀಲಿಸಿ, ನಷ್ಟ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ