ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಮಫಲಕ, ಜಾಹೀರಾತು ಫ್ಲೆಕ್ಸ್ ಗಳಲ್ಲಿ ಕನ್ನಡವೇ ಮಾಯ

ಬಳ್ಳಾರಿ / ಕಂಪ್ಲಿ : ರಾಜ್ಯ ಸರ್ಕಾರವು ಶೇಕಡ 60ರಷ್ಟು ಕನ್ನಡ ಭಾಷೆ, ಶೇಕಡಾ 40 ರಷ್ಟು ಇತರ ಭಾಷೆಯಲ್ಲಿ ಇರಬೇಕು ಎಂಬ ಕಟ್ಟುನಿಟ್ಟಿನ ಆದೇಶವಿದ್ದರೂ,
ನಗರದಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ ಆಗ್ರಹಿಸಿ ಈ ಹಿಂದೆ ಕನ್ನಡ ಪರ ಸಂಘಟನೆಗಳು ಗಟ್ಟಿಯಾದ ಧ್ವನಿ ಹೆಚ್ಚಿದರೂ ಆದರೆ ನಗರದಲ್ಲಿನ ಹಲವು ಅಂಗಡಿ ಹೋಟೆಲ್ ಮಳಿಗೆ ವ್ಯಾಪಾರಿ ಸಂಸ್ಥೆಗಳ ಹಾಗೂ ಜಾಹೀರಾತು ಪ್ಲಾಕ್ಸ್ ಗಳಲ್ಲಿ ಸಂಪೂರ್ಣ ಇಂಗ್ಲಿಷಮಯವಾಗಿದೆ.

ಕನ್ನಡಪರ ಸಂಘಟನೆಗಳು ಪ್ರತಿಭಟನೆ ಎಚ್ಚರಿಕೆ ನೀಡಿದರೂ ಸಹ ಸ್ಥಳೀಯ ಆಡಳಿತ ಕ್ಯಾರೆ ಎನ್ನುತ್ತಿಲ್ಲ,
ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸುವಂತೆ ಒತ್ತಾಯಿಸಿ ಈ ಹಿಂದೆಯೂ ಕನ್ನಡಪರ ಸಂಘಟನೆಗಳ ಮುಖಂಡರು ಪುರಸಭೆ ಮುಖ್ಯ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರೂ ಪರಿಸ್ಥಿತಿ ಕಿಂಚಿತ್ತೂ ಬದಲಾಗಿಲ್ಲ.

ಶಾಲಾ ಕಾಲೇಜುಗಳ ಜಾಹೀರಾತು ಫ್ಲೆಕ್ಸ್ ಗಳಲ್ಲಿ ಕನ್ನಡ ಭಾಷೆ ಇಲ್ಲವಾಗಿದ್ದು ಇಂಗ್ಲೀಷ್ ಭಾಷೆ ಭರಾಟೆ ಹೆಚ್ಚಿದೆ.

ನಗರದ ಹೊಸ ಬಸ್ ನಿಲ್ದಾಣ, ಹಳೆ ಬಸ್ ನಿಲ್ದಾಣ, ಸರ್ಕಾರಿ ಆಸ್ಪತ್ರೆ ಹಾಗೂ ಡಾ. ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಇಂಗ್ಲಿಷಿನ ಬ್ಯಾನರ್ ಗಳ ಭರಾಟೆ ಹೆಚ್ಚಾಗಿದೆ.

ಇದಕ್ಕೆ ಪುರಸಭೆ ಆಡಳಿತ ಕಡಿವಾಣ ಹಾಕುತ್ತೋ, ಇಲ್ಲವೋ? ಕನ್ನಡಪರ ಸಂಘಟನೆಗಳು ಕಪ್ಪುಮಸಿಯನ್ನು ಬಳಿಯುತ್ತಾರೋ ಕಾದು ನೋಡೋಣ…

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ