ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಲೀಕರು ಸರ್ಕಾರದ ನಿಗದಿತ ದರಗಳ ಫಲಕ ಅಳವಡಿಸಿಕೊಳ್ಳಲು ಮತ್ತು ರೈತರಿಗೆ ಸರ್ಕಾರದ ನಿಗದಿತ ಬೆಲೆಯಲ್ಲಿ ಮಾರಾಟ ಮಾಡಲು ರಾಜ್ಯ ಉಪಾಧ್ಯಕ್ಷ ಎನ್. ಭರ್ಮಣ್ಣ ಒತ್ತಾಯ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣ ರವರು ಮಾದ್ಯಮದವರೊಂದಿಗೆ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಮಳೆ ಅರಂಭವಾಗುತ್ತಿದ್ದು ರಾಜ್ಯದ ರೈತರು ಬಿತ್ತನೆ ಕಾರ್ಯ ಶುರು ಮಾಡುತ್ತಿದ್ದಾರೆ
ಆದರೆ ರೈತರಿಗೆ ಅವಶ್ಯಕವಾಗಿ ಬೇಕಾಗಿರುವ ಡಿ.ಎ.ಪಿ. ಯೂರಿಯಾ ಹಾಗೂ ಎಲ್ಲಾ ರೀತಿಯ ಗೊಬ್ಬರಗಳು ಮತ್ತು ಬಿತ್ತನೆ ಬೀಜಗಳು ಸಮರ್ಪಕವಾಗಿ ಸಿಗತ್ತಿಲ್ಲ ಗೊಬ್ಬರದ ಅಂಗಡಿಗಳಲ್ಲಿ ವಿಚಾರಿಸಿದರೆ ಗೊಬ್ಬರದ ಆಂಗಡಿ ಮಾಲೀಕರು ರೈತರಿಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ.

ರೈತರಿಗೆ ಸರಿಯಾದ ಸಮಯಕ್ಕೆ ಗೊಬ್ಬರ ಮತ್ತು ಬಿತ್ತನೆ ಬೀಜಗಳು ಸಿಗದೇ ಹೋದರೆ ರೈತರ ಸ್ಥಿತಿ ತುಂಬಾ ಚಿಂತಾಜನಕವಾಗುತ್ತದೆ, ಗುಣಮಟ್ಟದ ಬಿತ್ತನೆ ಬೀಜ ಮತ್ತು ಗೊಬ್ಬರಗಳನ್ನು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ರೈತರಿಗೆ ಒದಗಿಸಲು ಗೊಬ್ಬರದ ಅಂಗಡಿ ಮಾಲೀಕರು ರಾಜ್ಯದ ರೈತರಿಗೆ ಬಿತ್ತನೆಗೆ ಬೇಕಾಗುವ ಬೀಜಗಳ ಮತ್ತು ಔಷಧ ಗೊಬ್ಬರಗಳ ಸರ್ಕಾರದ ನಿಗದಿತ ದರ ಪಟ್ಟಿ ಫಲಕವನ್ನು ತಮ್ಮ ತಮ್ಮ ಅಂಗಡಿ ಮುಂಭಾಗದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು, ರೈತರಿಗೆ ಬಿತ್ತನೆ ಬೀಜಗಳು ಹಾಗು ಗೊಬ್ಬರಗಳ ಮೇಲೆ ಸರ್ಕಾರ ನಿಗದಿತ ದರ ಮಾಡಿರುವ ಬೆಲೆಯಲ್ಲಿ ಮಾಲೀಕರು ಮಾರಾಟ ಮಾಡಬೇಕು ಎಂದು ಹೇಳಿದರು.

ಗೊಬ್ಬರದ ಅಂಗಡಿ ಮಾಲೀಕರು ರೈತರಿಗೆ ಕಳಪೆ ಬೀಜ, ಕಳಪೆ ಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ಹಾಗೂ ಗೊಬ್ಬರದ ಅಂಗಡಿ ಮಾಲೀಕರು ಸರ್ಕಾರದ ದರ ಫಲಕ ಅಳವಡಿಸಿಕೊಳ್ಳದಿದ್ದರೆ, ಅಂತಹ ಅಂಗಡಿಗಳ ಮೇಲೆ ಕೂಡಲೇ ಸಂಬಂದ ಪಟ್ಟ ಅಧಿಕಾರಿಗಳು ಪರಿಶೀಲನೆ ಮಾಡಿ ಗೊಬ್ಬರದ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ