ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನವೀಕೃತಗೊಳಿಸಲಾದ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಬಾಗಲಕೋಟೆ : ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ನೈಋುತ್ಯ ರೈಲ್ವೆ ವಿಭಾಗದ ಗದಗ, ಧಾರವಾಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ ನಿಲ್ದಾಣಗಳು ನವೀಕರಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ವರ್ಚುವಲ್‌ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದ್ದಾರೆ.
ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ಹಾಗೂ ಜನಪ್ರತಿನಿಗಳು ಭಾಗವಹಿಸಿದ್ದರು.
ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ `ಕೇಂದ್ರ ಸರಕಾರ ರೈಲ್ವೆ ವಲಯದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ರಕ್ಷಣಾ ವ್ಯಾಪ್ತಿಯ ನಂತರ ಅತಿ ಹೆಚ್ಚು ಅನುದಾನ ರೈಲ್ವೆಗೆ ಮೀಸಲಿರಿಸಲಾಗಿದೆ. 2 ಲಕ್ಷ 65 ಸಾವಿರ ಕೋಟಿ ರೂ. ಅನುದಾನದಲ್ಲಿ ದೇಶಾದ್ಯಂತ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇಂದು 141 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 5 ನವೀಕೃತ ನಿಲ್ದಾಣಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ನಮ್ಮ ಸರಕಾರ 10 ವರ್ಷದಲ್ಲಿ 7 ಲಕ್ಷ 50 ಸಾವಿರ ಕೋಟಿ ರೂ. ವೆಚ್ಚದಲ್ಲಿ 44 ಸಾವಿರ ಕಿ.ಮೀ. ಹೊಸ ಹಳಿ ಅಳವಡಿಸಿದೆ. ಯುಪಿಎ ಸರಕಾರದ ಅವಯಲ್ಲಿ ಡಬ್ಲಿಂಗ್ ಹಳಿ ಅಳವಡಿಸಲು 11,500 ಕೋಟಿ ರೂ. ವೆಚ್ಚ ಮಾಡಲಾಗಿತ್ತು. ನಮ್ಮ ಸರಕಾರದ ಅವಧಿಯಲ್ಲಿ 70 ಸಾವಿರ ಕೋಟಿ ರೂ. ವ್ಯಯಿಸಲಾಗಿದೆ. ಈ ಮೊದಲು ರಾಜಕೀಯ ಕಾರಣಕ್ಕಾಗಿ ರೈಲ್ವೆ ವಲಯ ಬಳಕೆಯಾಗುತ್ತಿತ್ತು. ನಮ್ಮ ಸರಕಾರ ವಿಕಸಿತ ಭಾರತದ ಧ್ಯೇಯ ಹೊಂದಿದೆ” ಎಂದು ಸಮರ್ಥಿಸಿಕೊಂಡರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ