ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಹಾಪೂರ ತಾಲೂಕಿನ ವಿವಿಧ ತಾಲೂಕ ಪಂಚಾಯಿತಿಗಳಿಗೆ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಭೇಟಿ.

ನರೇಗಾ, ಜಲ ಜೀವನ ಸೇರಿದಂತೆ ವಿವಿಧ ಕಾಮಗಾರಿಗಳ ಪರಿವೀಕ್ಷಣೆ.

ಯಾದಗಿರಿ/ಶಹಾಪೂರ: ತಾಲೂಕಿನ ರಸ್ತಾಪೂರ, ಸಗರ, ಹೊಸಕೇರಾ, ಗೋಗಿ.ಕೆ ಮತ್ತು ಚಾಮನಾಳ ಗ್ರಾಮ ಪಂಚಾಯತಗಳಿಗೆ ಶ್ರೀ ಲವೀಶ್ ಒರಡಿಯಾ ಭಾ.ಆ.ಸೇ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಯಾದಗಿರಿ ರವರು ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ನರೇಗಾ ಯೋಜನೆಯ ಕಾಮಗಾರಿ ಸ್ಥಳ, ಜಲ ಜೀವನ್ ಮಿಷನ್/ಕುಡಿಯುವ ನೀರಿನ ಸೌಲಭ್ಯ, ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ವಚ್ಛ ಸಂಕೀರ್ಣ ಘಟಕ, ಸಮುದಾಯ ಶೌಚಾಲಯ ಪ್ರಗತಿ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಕುರಿತು ವೀಕ್ಷಣೆ ಮಾಡಿ ಪರಿಶೀಲಿಸಿದರು.

ಈ ವೇಳೆ ಜಿ.ಪಂ.ಯ ಮಾನ್ಯ ಯೋಜನಾ ನಿರ್ದೇಶಕರಾದ ಶ್ರೀ ಸಿ.ಬಿ.ದೇವರಮನಿ, ಸಹಾಯಕ ಯೋಜನಾಧಿಕಾರಿ ಶ್ರೀ ಸಂತೋಷ ಶಹಾಪೂರ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ, ಶ್ರೀ ಬಸವರಾಜ ಶರಭೈ ರವರು ಉಪಸ್ಥಿತರಿದ್ದರು.

ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, RWS & KRIDL, ತಾ.ಪಂ.ಯ ಸಹಾಯಕ ನಿರ್ದೇಶಕರು (ಪ್ರ), ಸೇರಿದಂತೆ ಅನುಷ್ಠಾನ ಅಧಿಕಾರಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು, ಪಿಡಿಒ, ನರೇಗಾ ಸಿಬ್ಬಂದಿ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!