ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಕಾಯ್ತಿದ್ದವರಿಗೆ ರಾಜ್ಯ ಚುನಾವಣಾ ಆಯುಕ್ತರ ಮಾಹಿತಿ

ತುಮಕೂರು/ ತಿಪಟೂರು: ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಮುಂಬರುವ ಅಕ್ಟೋಬರ್‌-ನವೆಂಬರ್‌ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿಎಸ್‌ ಸಂಗ್ರೇಶಿ ತಿಳಿಸಿದರು.

ತಿಪಟೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ” ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸರಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಇದೇ ತಿಂಗಳ ಕೊನೆಯೊಳಗೆ ಅಂದರೆ ಮೇ 30ರ ಒಳಗೆ ಸರಕಾರ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ನೀಡುವುವಾಗಿ ತಿಳಿಸಿದ್ದು ಅದಕ್ಕಾಗಿ ಕಾಯುತ್ತಿದ್ದೇವೆ. ಅವರು ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಸಿದ್ಧತೆ ಪ್ರಾರಂಭಿಸುತ್ತೇವೆ. ಸಿದ್ಧತೆ ಹಾಗೂ ಚುನಾವಣಾ ತಯಾರಿಗಾಗಿ ಎರಡು ಮೂರು ತಿಂಗಳು ಬೇಕಾಗುತ್ತದೆ. ಹಾಗಾಗಿ ದಸರಾ ನಂತರ ಅಂದರೆ ಈ ವರ್ಷ ನವೆಂಬರ್‌ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಮಾಹಿತಿ ” ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸಪ್ತಶ್ರೀ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುದರ್ಶನ್‌, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ, ನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ವೆಂಕಟೇಶ್‌, ಗ್ರೇಡ್‌-2 ತಹಸೀಲ್ದಾರ್‌ ಜಗನ್ನಾಥ್‌, ಮತ್ತಿತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ