ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಪರೇಷನ್ ಸಿಂಧೂರ ವಿಜಯೋತ್ಸವಹನೂರಿನಲ್ಲಿ ತಿರಂಗ ಯಾತ್ರೆ

ಚಾಮರಾಜನಗರ/ ಹನೂರು: ಆಪರೇಷನ್ ಸಿಂಧೂರ ವಿಜಯೋತ್ಸವದ ಅಂಗವಾಗಿ ಹನೂರು ಬಿಜೆಪಿ ಮಂಡಲ ವತಿಯಿಂದ ಪಟ್ಟಣದಲ್ಲಿ ತಿರಂಗ ಯಾತ್ರೆ ನಡೆಸಲಾಯಿತು.

ಪಟ್ಟಣದ ಆರ್‌. ಎಂ. ಸಿ ಆವರಣದಿಂದ ಹೊರಟು ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಮುಖಾಂತರ ಮುಖ್ಯ ರಸ್ತೆಯಲ್ಲಿ ತೆರಳಿ ಭಾರತೀಯ ಸೇನೆ ಮುಖ್ಯಸ್ಥರಿಗೆ ಜೈಕಾರದೊಂದಿಗೆ ಭಾರತ ಮಾತಾಕಿ ಜೈ ಭಾರತಾಂಬೆಗೆ ಜೈ ಎಂದು ಘೋಷಣೆಗಳನ್ನು ಕೂಗುತ್ತಾ, ನಾಗಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು.

ಈ ವೇಳೆ ಮಾತನಾಡಿದ ಹನೂರು ಬಿಜೆಪಿ ಮಂಡಲ ಅಧ್ಯಕ್ಷ ವೃಷಭೇಂದ್ರ ಭಾರತೀಯರು ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಭಾರತೀಯ ಪ್ರವಾಸಿಗರನ್ನು ಗುಂಡಿಟ್ಟು ಕೊಂದಿದ್ದ ಉಗ್ರವಾದಿಗಳ ವಿರುದ್ಧ ಭಾರತ ಸರ್ಕಾರ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನೂರಾರು ಭಯೋತ್ಪಾದಕರನ್ನು ಮಟ್ಟ ಹಾಕುವ ಮೂಲಕ ಪಾಕಿಸ್ತಾನದೊಳಗೆ ಭಯೋತ್ಪಾದಕ ಅಡಗುತಾಣಗಳನ್ನು ಚಿದ್ರಗೊಳಿಸಿದ್ದಾರೆ. ನಮ್ಮ ಭಾರತೀಯ ಸೇನೆ ಹಾಗೂ ಯೋಧರಿಗೆ ಧನ್ಯವಾದಗಳು ತಿಳಿಸುತ್ತೇವೆ. ಭಾರತೀಯ ಸೈನಿಕರಿಗೆ ಬೆಂಬಲವಾಗಿ ಈ ಯಾತ್ರೆಯನ್ನು
ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮತ್ತು ಬಿಜೆಪಿ ಮಂಡಲ ಅಧ್ಯಕ್ಷರು ಜಗನ್ನಾಥ ನಾಯ್ಡು, ಬಿಜೆಪಿ ಒಬಿಸಿ ಘಟಕದ ಸಂಚಾಲಕ ಲೋಕೇಶ್ ಜಟ್ಟಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವರಪ್ರಸಾದ್, ಮುಖಂಡರಾದ ರವಿ, ವಕೀಲ ಚಿನ್ನರಾಜು, ಮಾತೃಭೂಮಿ ಮೂರ್ತಿ, ಬಸವಣ್ಣ ಇನ್ನಿತರರು ಯಾತ್ರೆಯಲ್ಲಿ ಭಾಗವಹಿಸಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ