ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂರಾರು ಕೋಟಿ ಐಷಾರಾಮಿ ಜೀವನ ತ್ಯಜಿಸಿ ಸನ್ಯಾಸಿಯಾದ ಉದ್ಯಮಿ

ಯಾದಗಿರಿ/ ಸೈದಾಪುರ: ತಾಲ್ಲೂಕಿನ ಸೈದಾಪುರ ಮೂಲದ ದಿಲೀಪ್ ಕುಮಾರ್ ದೋಖಾ ಎಂಬ 55 ವರ್ಷದ ಕೋಟ್ಯಾಧಿಪತಿ, ಜೈನ್ ಬಡಾವಣೆಯ ನಿವಾಸಿ, ನೂರಾರು ಕೋಟಿ ರೂ ಆಸ್ತಿಯ ಒಡೆಯ, ಮೂವರು ಹೆಣ್ಣು ಮಕ್ಕಳು ಮತ್ತು ಪತ್ನಿಯನ್ನು ಬಿಟ್ಟು ಇದೀಗ ಜೈನ ದೀಕ್ಷೆ ಪಡೆದಿದ್ದಾರೆ.

ಆಧುನಿಕ ಕಾಲಘಟ್ಟದಲ್ಲಿ ಎಲ್ಲವನ್ನೂ ತೊರೆದು ಧರ್ಮದ ರಕ್ಷಣೆಯ ಕೆಲಸ ಮಾಡುವವರು ವಿರಳ. ಅದರಲ್ಲೂ ಸನ್ಯಾಸ ದೀಕ್ಷೆ ಪಡೆಯುತ್ತಿರುವವರು ತೀರಾ ಕಡಿಮೆ ಅದಕ್ಕೆ ವಿರುದ್ದ ಎನ್ನುವ ಹಾಗಾಗಿದೆ.

ದಿಲೀಪ್ ಕುಮಾರ್ ದೋಖಾ ಅವರು ಸುಮಾರು ವರ್ಷಗಳಿಂದ ಅಮೆರಿಕಾದಲ್ಲಿ ಮೆಡಿಸಿನ್ ಉತ್ಪಾದನಾ ವ್ಯವಹಾರ ಮಾಡುತ್ತಿದ್ದರು, ಸೈದಾಪುರ ಸೇರಿದಂತೆ ಬೆಂಗಳೂರಿನಲ್ಲೂ ಆಸ್ತಿ ಹೊಂದಿದ್ದಾರೆ. ದಿಲೀಪ್ ಕುಮಾರ್ ದೋಖಾ ಸಂಸಾರ ಜೀವನಕ್ಕೆ ವಿದಾಯ ಹೇಳಿ, ತನ್ನ ಮಕ್ಕಳ ಮದುವೆ ಆದ ಕೂಡಲೇ ಜೈನ ಮುನಿ ಆಗಿ ಪರಿವರ್ತನೆ ಆಗಿದ್ದಾರೆ.

ದಿಲೀಪ್ ಕುಮಾರ್ ದೋಖಾ ಅವರು ಜೈನ ದೀಕ್ಷೆ ತಮ್ಮ 14 ನೇಯ ವಯಸ್ಸಿನಲ್ಲಿ ಪಡೆಯುವಾಗ ಪೋಷಕರು ವಿರೋಧ ಪಡಿಸಿದ ಕಾರಣ ತೆಗೆದುಕೊಳ್ಳಲು ಸಾಧ್ಯವಾಗದ ಹಿನ್ನಲೆಯಲ್ಲಿ 41 ವರ್ಷಗಳ ಬಳಿಕ ಈಗ ಸ್ವಿಕಾರ ಮಾಡಿದ್ದಾರೆ.

ಇನ್ನು ಜೈನ್ ದೀಕ್ಷೆ ಪಡೆದಿದ್ದಕ್ಕೆ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೊನೆಯದಾಗಿ ಅದ್ದೂರಿಯಾಗಿ ಸೈದಾಪುರ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾರೋಟದಲ್ಲಿ ಮೆರವಣಿಗೆ ಮಾಡಿ ಬಿಳ್ಕೋಡುಗೆ ನೀಡಿದ್ದಾರೆ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ