ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿರೇ ಓತಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಜರುಗಿದ ಹೇಮರೆಡ್ಡಿ ಮಲ್ಲಮ್ಮನವರ ಜಯಂತೋತ್ಸವ

ಬಾಗಲಕೋಟೆ ಜಿಲ್ಲೆಯ ಇಲ್ಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತೋತ್ಸವ ಅತ್ಯಂತ ಸಡಗರ ಸಂಭ್ರಮ ಭಕ್ತಿ ಭಾವದಿಂದ ಅಪಾರ ಭಕ್ತರ ಸಮ್ಮುಖದಲ್ಲಿ ಜರುಗಿತು.

ಬೆಳಗ್ಗೆ ಮಲ್ಲಮ್ಮನವರ ಮೂರ್ತಿಗೆ ಅಭಿಷೇಕ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಗೋಪುರಕ್ಕೆ ಕಳಸಾರೋಹಣ ಕಾರ್ಯಕ್ರಮವು ಸಕಲ ವಾದ್ಯ ಮೇಳಗಳೊಂದಿಗೆ ಜರುಗಿತು. ನಂತರ ಮಲ್ಲಮ್ಮ ತಾಯಿಯವರ ಭಾವಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ, ಸಂಭ್ರಮದಿಂದ ಜರುಗಿತು. ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಮೆರವಣಿಗೆಯುದ್ದಕ್ಕೂ ಕಳಸದೊಂದಿಗೆ ಭಾಗವಹಿಸಿ ಮಲ್ಲಮ್ಮ ತಾಯಿಯ ಆಶೀರ್ವಾದ ಪಡೆದರು.

ಭವ್ಯ ಮೆರವಣಿಗೆ ನಂತರ ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಬಂದಂತಹ ಭಕ್ತಾದಿಗಳಿಗೆ ಬೂಂದಿ, ಚಪಾತಿ, ಅನ್ನ ಸಾರು ಖಡಕ್ ರೊಟ್ಟಿ ಹೀಗೆ ಉತ್ತರ ಕರ್ನಾಟಕದ ಶೈಲಿಯ ಪ್ರಸಾದವನ್ನು ಸವಿದು ತಾಯಿಯ ಆಶೀರ್ವಾದ ಪಡೆದರು.

ಜಯಂತೋತ್ಸವ ಕಾರ್ಯಕ್ರಮದಲ್ಲಿ ಕಂದಗಲ್ಲ ಗ್ರಾಮದ ಪ್ರಗತಿಪರ ರೈತರು ರೆಡ್ಡಿ ಸಮಾಜದ ಹಿರಿಯರಾದ ಚನ್ನಪ್ಪಗೌಡ್ರ ನಾಡಗೌಡ್ರ ಸೇರಿದಂತೆ
ಹಿರೇಓತಗೇರಿ ಗ್ರಾಮದ ಸಕಲ ಗುರುಹಿರಿಯರು, ಯುವ ಮಿತ್ರರು, ತಾಯಂದಿರು ತಮ್ಮ ಭಕ್ತಿ ಸೇವೆಯನ್ನ ಮಾಡಿದರು. ಸುತ್ತಮುತ್ತಲಿನ ಗ್ರಾಮದವರು ಸಹ ಆಗಮಿಸಿ ಜಯಂತೋತ್ಸವದಲ್ಲಿ ಪಾಲ್ಗೊಂಡರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ