ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಡಿಗೇರ ಜಿಲಾನಸಾಬ್ ರವರಿಗೆ ರಾಜ್ಯಮಟ್ಟದ ‘ಕರ್ನಾಟಕ ಕವಿಭೂಷಣ’ ಪ್ರಶಸ್ತಿ

ಬಳ್ಳಾರಿ / ಕಂಪ್ಲಿ : ಚುಟುಕು ಸಾಹಿತ್ಯ ಪರಿಷತ್ ಕೊಪ್ಪಳ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿಯಲ್ಲಿ ಪಟ್ಟಣದ ಶಿಕ್ಷಕ ಸಾಹಿತಿ ಬಡಿಗೇರ್ ಜಿಲಾನಸಾಬ್ ಅವರಿಗೆ ರಾಜ್ಯಮಟ್ಟದ ‘ಕರ್ನಾಟಕ ಕವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾನುವಾರ ರಂದು ಕೊಪ್ಪಳ ನಗರದ ಶ್ರೀ ಮಹಾಂತಯ್ಯನ ಮಠ ಕಲ್ಯಾಣ ಮಂಟಪದಲ್ಲಿ ಕಿಶನ್ ಸುರ್ವೆ ಹಾಗೂ ತೇಜಸ್ವಿ ರವರ ಮದುವೆ ನಿಮಿತ್ಯ ಜರುಗಿದ ಕವಿಗೋಷ್ಠಿಯಲ್ಲಿ “ವೀರ ಯೋಧರ ನಿಮಗೊಂದು ನನ್ನ ಸಲಾಂ” ಎಂಬ ಶೀರ್ಷಿಕೆಯ ಕವನ ವಾಚನ ವಾಚಿಸಿದಕ್ಕಾಗಿ ರಾಜ್ಯಮಟ್ಟದ ‘ಕರ್ನಾಟಕ ಕವಿಭೂಷಣ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಭಾಗ್ಯಜ್ಯೋತಿ, ಬೆಂಗಳೂರಿನ ಹಿರಿಯ ಪತ್ರಕರ್ತರಾದ ರಮೇಶ ಸುರ್ವೆ, ಗದಗ ಹಿರಿಯ ಸಾಹಿತಿಗಳಾದ ಡಾ. ರಾಜೇಂದ್ರ ಗಡಾದ, ಸಿರಿ ಕನ್ನಡ ರಾಜ್ಯಾಧ್ಯಕ್ಷರಾದ ಜಿ.ಎಸ್. ಗೋನಾಳ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರುದ್ರಪ್ಪ ಭಂಡಾರಿ, ಕನ್ನಡ ಚಲನಚಿತ್ರದ ನಾಯಕಿ ಮೀನಾ ಕುಮಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ