
ಬೆಂಗಳೂರು: ಬೆಂಗಳೂರು ಹೆಚ್ಚುವರಿ ಜಿಲ್ಲಾಧಿಕಾರಿಯವರು ಗೋವು ಹಾಗೂ ಒಂಟೆ ಸಾಗಾಟ ಮಾಡುವುದನ್ನು ನಿಷೇಧಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ, ವರದಿಯ ಹಿನ್ನಲೆಯಲ್ಲಿ ಕೇವಲ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕೂಡಾ ಗೋ-ವಂಶವನ್ನು ಕುರ್ಬಾನಿಗಾಗಿ, ಹಿಂಸಾತ್ಮಕವಾಗಿ ಸಾಗಾಟ ಮಾಡುವುದನ್ನು ಜೂನ್ 6 ರವರೆಗೆ ಸಂಪೂರ್ಣ ನಿಷೇಧಿಸಬೇಕೆಂದು ಈ ಆದೇಶವನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಬಿ. ಇ ಸುರೇಶ, ಬಜರಂಗದಳ ಪ್ರಾಂತ ಸಹಸಂಯೋಜಕ ಗೋವರ್ಧನ್ ಸಿಂಗ್ ರವರ ನಿಯೋಗದ ವತಿಯಿಂದ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮನವಿ ಪತ್ರದ ಮೇಲೆಯೇ ಆಯುಕ್ತರಿಗೆ ಕೂಡಲೇ ರಾಜ್ಯಕ್ಕೆ ಅನ್ವಯಿಸುವಂತೆ ಜಾರಿಗೊಳಿಸಲು ಸಚಿವರು ಸಹಮತ ಸೂಚಿಸಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ
